ಮದ್ದೂರು ತಾಲ್ಲೂಕಿನ ಭಾರತೀನಗರದ ಮಾದೇಗೌಡ ಬಡಾವಣೆಯಲ್ಲಿ ಕಳ್ಳರು ಹಾಡುಹಗಲೇ ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ಇಂದು ನಡೆದಿದೆ.
ಯತೀಶ್ ಎಂಬುವರ ಮನೆಗೆ ನುಗ್ಗಿರುವ ಕಳ್ಳರು ಹಿಂದಿನ ಬಾಗಿಲನ್ನು ಒಡೆದು ಹಾಕಿ ಮನೆಯಲ್ಲಿ ಯಾರು ಇಲ್ಲದೇ ಇರುವುದನ್ನು ಅರಿತ ಕಳ್ಳರು ಮನೆಯಲ್ಲಿದ್ದ ಸುಮಾರು ಬೆಲೆಬಾಳುವ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಾರೆ.
ಸ್ಥಳಕ್ಕೆ ಬೆರಳಚ್ಚು ತಜ್ಙರು, ಶ್ವಾನದಳ ಭೇಟಿ ನೀಡಿದ್ದು ಈ ಸಂಬಂಧ ಭಾರತೀನಗರ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.