ಮಂಡ್ಯ ನಗರದ ಗಾಂಧಿನಗರದ ಎರಡನೇ ಕ್ರಾಸ್ ನಲ್ಲಿರುವ ಶ್ರೀರಾಮಮಂದಿರದಲ್ಲಿ ಹುಣ್ಣಿಮೆಯ ಪ್ರಯುಕ್ತ ವಿಶೇಷ ಪೂಜೆ ಸಲ್ಲಿಸಲಾಯಿತು.
ಹುಣ್ಣಿಮೆಯ ಅಂಗವಾಗಿ ಶ್ರೀ ರಾಮ,ಲಕ್ಷ್ಮಣ,ಸೀತಾ ಮಾತೆ ಹಾಗೂ ಆಂಜನೇಯ ವಿಗ್ರಹಗಳಿಗೆ ಪುಷ್ಪಗಳಿಂದ ಅಲಂಕರಿಸಲಾಗಿತ್ತು.
ನೂರಾರು ಭಕ್ತರು ವಿಶೇಷ ಪೂಜೆಯಲ್ಲಿ ಭಾಗವಹಿಸಿ ಕೀರ್ತನೆಗಳನ್ನು ಹಾಡಿ ದೇವರ ಕೃಪೆಗೆ ಪಾತ್ರರಾದರು.