ಮಂಡ್ಯದ ವಿವಿ ರಸ್ತೆಯಲ್ಲಿ ಇರುವ ಮಾಂಡವ್ಯ ವೃತ್ತಿಪರ ಛಾಯಾಚಿತ್ರ ಗ್ರಾಹಕರ ಸಂಘದ ವತಿಯಿಂದ 183ನೇ ವಿಶ್ವ ಛಾಯಾಗ್ರಹಣ ದಿನಾಚರಣೆ ಅಂಗವಾಗಿ ಛಾಯಾಗ್ರಾಹಕ ಕುಟುಂಬದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಪ್ರತಿವರ್ಷ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ನಮ್ಮ ಸಂಘದ ವತಿಯಿಂದ ಆಚರಣೆ ಮಾಡಿಕೊಂಡು ಬರುತ್ತಿದ್ದೇವೆ.ಅದರಂತೆ ಈ ವರ್ಷವೂ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಛಾಯಾಗ್ರಾಹಕರ ಕುಟುಂಬದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿದ್ದೇವೆ.ಮಕ್ಕಳು ಶೈಕ್ಷಣಿಕ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡಲಿ ಎನ್ನುವ ಉದ್ದೇಶದಿಂದ ಈ ಕಾರ್ಯಕ್ರಮ ಮಾಡಿದ್ದೇವೆ ಎಂದು ಸದಸ್ಯರು ತಿಳಿಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಕೆ.ಕೆ.ಪ್ರಭು, ಕಾರ್ಯದರ್ಶಿ ಜಗದೀಶ್, ಸಂಘಟನಾ ಕಾರ್ಯದರ್ಶಿ ಲಕ್ಷ್ಮಣ, ಸಲಹೆಗಾರರಾದ ನಂಜುಂಡಸ್ವಾಮಿ, ನಿರ್ದೇಶಕ ಜಗನ್ನಾಥ್ ಹಾಗೂ ಹಿರಿಯರಾದ ರಾಜಣ್ಣ, ಕರುಣ ಶ್ರೀ ಶಿವಲಿಂಗು, ಸೋಮಶೇಖರ್ ಇತರ ಸದಸ್ಯರು ಭಾಗವಹಿಸಿದ್ದರು.