ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಕೆ.ಕೆಂಪೇಗೌಡ(96)ಕಳೆದ ರಾತ್ರಿ ನಿಧನರಾದರು.
ಕಳೆದ ರಾತ್ರಿ ಸ್ವಗ್ರಾಮ ಪಾಂಡವಪುರ ತಾಲ್ಲೂಕಿನ ಚಿನಕುರಳಿ ಗ್ರಾಮದ ತೋಟದ ಮನೆಯಲ್ಲಿ ಅವರು ಕೊನೆಯುಸಿರೆಳೆಸಿದ್ದಾರೆ.
ಇಂದು ಮಧ್ಯಾಹ್ನ 3 ರಿಂದ 4ಗಂಟೆಯೊಳಗೆ ಸ್ವಗ್ರಾಮ ಪಾಂಡವಪುರ ತಾಲೂಕು ಚಿನಕುರಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಮೃತರು ನಾಲ್ಕು ಗಂಡುಮಕ್ಕಳು, ಐದು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಪಾಂಡವಪುರ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.1983 ರಲ್ಲಿ ಜನತಾ ಪಕ್ಷದಿಂದ ಮೊದಲ ಬಾರಿ ಶಾಸಕರಾದ ಕೆಂಪೇಗೌಡರು 1985,1999 ರಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ತಾಲೂಕು ಬೋರ್ಡ್ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದರು.