ರೆಬಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ನಟನೆಯ ಬಹು ನಿರೀಕ್ಷಿತ ಬ್ಯಾಡ್ ಮ್ಯಾನರ್ಸ ಚಲನಚಿತ್ರದ ಟೈಟಲ್ ಸಾಂಗ್ ಇಂದು ಬಿಡುಗಡೆ ಆದ ಹಿನ್ನೆಲೆಯಲ್ಲಿ ಮಂಡ್ಯ ನಗರದ ಮಹಾವೀರ ವೃತ್ತದಲ್ಲಿ ಅಂಬರೀಶ್ ಹಾಗೂ ಅಭಿಷೇಕ್ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.
ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ಅಧ್ಯಕ್ಷ ಬೇಲೂರು ಸೋಮಶೇಖರ್ ನೇತೃತ್ವದಲ್ಲಿ ಅಂಬರೀಶ್ ಹಾಗೂ ಅಭಿಷೇಕ್ ಅಭಿಮಾನಿಗಳು ಮಹಾವೀರ ವೃತ್ತದಲ್ಲಿ ಬ್ಯಾಡ್ ಮ್ಯಾನರ್ಸ್ ಚಿತ್ರದ ಬೃಹತ್ ಪೋಸ್ಟರ್ ಗೆ ಹೂವಿನ ಹಾರ ಹಾಕಿ, ಪಟಾಕಿ ಸಿಡಿಸಿ ಸಾರ್ವಜನಿಕರಿಗೆ ಸಿಹಿ ಹಂಚಿ ಸಂಭ್ರಮ ಆಚರಿಸಿದರು.
ಈ ಸಂದರ್ಭದಲ್ಲಿ ವಿಶ್ವಾಸ್, ಟೀ ಸ್ಟಾಲ್ ಅಭಿ, ಹನಿಯಂಬಾಡಿ ಸತೀಶ್, ಕಾರಸವಾಡಿ ಕಂಠಿ, ಮುಸಾವಿರ್, ಸುರೇಶ್ ಮೊದಲಾದವರು ಇದ್ದರು.