Friday, September 20, 2024

ಪ್ರಾಯೋಗಿಕ ಆವೃತ್ತಿ

ಗುರಿ ಇದ್ದಾಗ ಮಾತ್ರ ಕ್ರೀಡೆಯಲ್ಲಿ ಯಶಸ್ಸು ಗಳಿಸಲು ಸಾಧ್ಯ

ಗುರಿ ಇದ್ದಾಗ ಮಾತ್ರ ಕ್ರೀಡೆಯಲ್ಲಿ ಯಶಸ್ಸು ಗಳಿಸಲು ಸಾಧ್ಯ ಎಂದು
ಸಮಾಜ ಸೇವಕ ಕದಲೂರು ಉದಯ್ ಅಭಿಪ್ರಾಯ ವ್ಯಕ್ತಪಡಿಸಿದರು.

ಮದ್ದೂರು ತಾಲ್ಲೂಕಿನ ಭಾರತೀನಗರ ವ್ಯಾಪ್ತಿಯ ಬ್ಯಾಡರಹಳ್ಳಿ ಗ್ರಾಮದಲ್ಲಿ ಯಂಗ್ ಸ್ಟಾರ್ ಕ್ರಿಕೆಟರ್ಸ್ ಹಾಗೂ ಗ್ರಾಮಸ್ಥರು ಆಯೋಜಿಸಿದ್ದ ಪ್ರಥಮ ವರ್ಷದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.

ವ್ಯಕ್ತಿತ್ವ ಬೆಳೆಯಲು ಕ್ರೀಡೆ ಬಹಳ ಮುಖ್ಯ. ಮನುಷ್ಯ ಮಾನಸಿಕವಾಗಿ ಹಾಗೂ ದೈಹಿಕವಾಗಿ ಸದೃಢವಾಗಿರಬೇಕಾದರೆ ಕ್ರೀಡೆ ಬಹಳ ಮುಖ್ಯ ಎಂದರು.

ಇಂದಿನ ದಿನಗಳಲ್ಲಿ ಗ್ರಾಮೀಣ ಪ್ರದೇಶದ ಯುವಕರು ಕ್ರೀಡೆಗಳಿಂದ ವಂಚಿತರಾಗುತ್ತಿದ್ದಾರೆ. ಯಾಕೆಂದರೆ ಗ್ರಾಮೀಣ ಮಟ್ಟದಲ್ಲಿ ಕ್ರೀಡಾಂಗಣಗಳು,ಸೂಕ್ತ ತರಬೇತಿ ಇಲ್ಲದಿರುವುದು ಪ್ರಮುಖ ಕಾರಣ.ಗ್ರಾಮೀಣ ಮಕ್ಕಳಿಗೆ ಸರಿಯಾದ ತರಬೇತಿ ಸಿಕ್ಕರೆ ರಾಜ್ಯ, ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಹೋಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.

ಈ ಸಂದರ್ಭದಲ್ಲಿ ಮಾಜಿ ಸೈನಿಕ ಸಿಪಾಯಿ ಶ್ರೀನಿವಾಸ್, ಗ್ರಾ.ಪಂ.ಸದಸ್ಯ ಕದಲೂರು ತಿಮ್ಮೇಗೌಡ, ಯತೀಶ್,ಶಿವು ಸೇರಿದಂತೆ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!