ಅಣೆಕಟ್ಟುಗಳ ಸುರಕ್ಷತೆ ಕುರಿತ ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಲು ರಾಜಸ್ತಾನದ ಜೈಪುರಕ್ಕೆ ಆಗಮಿಸಿದ ಕರ್ನಾಟಕ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಕಾಂಗ್ರೆಸ್ ಮುಖಂಡರು ಭವ್ಯ ಸ್ವಾಗತ ನೀಡಿ ಬರಮಾಡಿಕೊಂಡರು.
ಪಿಂಕ್ ಸಿಟಿ ಜೈಪುರ ವಿಮಾನ ನಿಲ್ದಾಣಕ್ಕೆ ಬಂದಿಳಿದ ಡಿ.ಕೆ ಶಿವಕುಮಾರ್ ಅವರನ್ನು, ಆರತಿ ಬೆಳಗಿ, ತಿಲಕ ಹಚ್ಚಿ ಬರಮಾಡಿಕೊಳ್ಳಲಾಯಿತು.
ಅಂತರರಾಷ್ಟ್ರೀಯ ಸಮ್ಮೇಳನದಲ್ಲಿ ಉಪ ರಾಷ್ಟ್ರಪತಿ ಜಗದೀಪ್ ಧನಕರ್, ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ರಾಜಸ್ಥಾನದ ಸಿಎಂ ಅಶೋಕ್ ಗೆಹ್ಲೋಟ್ ಸೇರಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಭಾಗವಹಿಸಿದ್ದರು.
ನಮ್ಮ ದೇಶದಲ್ಲಿ ನಿರಂತರವಾಗಿ ಹೆಚ್ಚುತ್ತಿರುವ ನೀರಿನ ಬೇಡಿಕೆಯನ್ನು ಪೂರೈಸಲು ಅಣೆಕಟ್ಟು ಸುರಕ್ಷತೆಯು ಪ್ರಮುಖ ಪ್ರಾಮುಖ್ಯತೆಯನ್ನು ಹೊಂದಿದೆ ಮತ್ತು ಅವುಗಳ ಕಾರ್ಯಾಚರಣೆಯ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಅಗತ್ಯವಾಗಿವೆ ಡಿಕೆ ಶಿವಕುಮಾರ್ ತಿಳಿಸಿದರು. ನಂತರ ರಾಜಸ್ಥಾನ ಸಚಿವ ಸಂಪುಟದ ಮಂತ್ರಿಗಳೊಂದಿಗೆ ಬೋಜನಕೂಟದಲ್ಲಿ ಭಾಗವಹಿಸಿ ಆತಿಥ್ಯ ಸ್ವೀಕರಿಸಿದರು.