Friday, September 20, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ದಾಳಿ ನಡೆಸಿ ಮೇಕೆಯನ್ನು ಹೊತ್ತೊಯ್ದ ಚಿರತೆ

ಹಾಡ ಹಗಲೇ ಜಮೀನಿನಲ್ಲಿ ಮೇಯುತ್ತಿದ್ದ ಮೇಕೆಗಳ ಮೇಲೆ ಚಿರತೆ ದಾಳಿ ನಡೆಸಿ ಒಂದು ಮೇಕೆಯನ್ನು ಹೊತ್ತೊಯ್ದಿರುವ ಘಟನೆ ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಚಿಕ್ಕತಾಯಮ್ಮ ಎಂಬುವರಿಗೆ ಸೇರಿದ ಮೇಕೆ ಬಲಿಯಾಗಿದ್ದು, ಹಗಲು ವೇಳೆಯಲ್ಲಿಯೇ ರೈತರು ಮೇಕೆಗಳನ್ನು ಮೇಯುಸುತ್ತಿದ್ದಾಗ ಈ ಘಟನೆ ನಡೆದಿದ್ದು ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಈ ಭಾಗದಲ್ಲಿ ಇದುವರೆಗೂ 9 ಮೇಕೆಗಳನ್ನು ಚಿರತೆ ಬಲಿ ತೆಗೆದುಕೊಂಡಿದೆ. ಅರಣ್ಯ ಇಲಾಖೆಯ ಗಮನಕ್ಕೆ ತಂದರೂ ಬೋನು ಇಡಲು ತಾತ್ಸಾರ ತೋರುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!