Sunday, May 5, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಪ್ರಚಾರದ ಕೊನೆ ದಿನ ಚುನಾವಣಾ ಎದುರಾಳಿಗಳ ‘ಶಕ್ತಿ ಪ್ರದರ್ಶನ’

ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಪ್ರಚಾರ ಬುಧವಾರ ಸಂಜೆ ಅಂತ್ಯಗೊಂಡಿದೆ. ಆದರೆ ಪ್ರಚಾರದ ಕೊನೆದಿನವಾದ ಇಂದು ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಹಾಗೂ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಬೆಂಬಲಿಗರೊಂದಿಗೆ ರೋಡ್ ಶೋ ನಡೆಸಿ, ಪರಸ್ಪರ ಶಕ್ತಿ ಪ್ರದರ್ಶನ ಮಾಡಿದರು.

ಬುಧವಾರ ಮಧ್ಯಾಹ್ನ ಸಚಿವ ಎನ್.ಚಲುವರಾಸ್ವಾಮಿ, ಶಾಸಕ ರವಿಕುಮಾರ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಮಂಡ್ಯನಗರದ ಪ್ರಮುಖ ರಸ್ತೆಗಳಲ್ಲಿ ಬೆಂಬಲಿಗರ ಬೈಕ್ ರ್‍ಯಾಲಿ ಜೊತೆಗೆ ರೋಡ್ ಶೋ ನಡೆಸಿ ಶಕ್ತಿ ಪ್ರದರ್ಶನ ಮಾಡಿದರು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಗರು ಪಾಲ್ಗೊಂಡಿದ್ದರು. ಕಾಂಗ್ರೆಸ್ ಬೆಂಬಲಿಗರು ಸ್ಟಾರ್ ಚಂದ್ರು ಪರ ಘೋಷಣೆಗಳನ್ನು ಮೊಳಗಿಸಿದರು.

ಹೆಚ್.ಡಿ.ಕೆ ಶಕ್ತಿ ಪ್ರದರ್ಶನ

ಬಿಜೆಪಿ – ಜೆಡಿಎಸ್ ಪಕ್ಷದ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶಿಸಿದರು.

ಬೆಂಗಳೂರು -ಮೈಸೂರು ಹೆದ್ದಾರಿಯಲ್ಲಿ ರೋಡ್ ಶೋ ನಡೆಸಿದ ಹೆಚ್‍.ಡಿ ಕುಮಾರಸ್ವಾಮಿ ಪರವಾಗಿ ಅಪಾರ ಜನಸ್ತೋಮ ಪಾಲ್ಗೊಂಡಿತ್ತು.

ಮಂಡ್ಯ ವಿಶ್ವವಿದ್ಯಾನಿಲಯ ಆವರಣದಿಂದ ಪುತ್ರ ನಿಖಿಲ್ ಕುಮಾರಸ್ವಾಮಿ ಜೊತೆಗೂಡಿ ರೋಡ್ ಶೋ ಮೂಲಕ ಮತಯಾಚನೆಗೆ ಹೊರಟ ಮೈತ್ರಿ ಪಕ್ಷದ ಅಭ್ಯರ್ಥಿಗೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಜಯ ಘೋಷ ಮೊಳಗಿಸಿದರು. ಅಪಾರ ಜನಸ್ತೋಮದ ನಡುವೆ ತೆರೆದ ವಾಹನದಲ್ಲಿ ಕೈ ಮುಗಿದು ನನ್ನ ಗೆಲುವಿಗೆ ಶ್ರಮಿಸುವಂತೆ ಮನವಿ ಮಾಡಿದರು.

ಮಂಡ್ಯನಗರದ ಸಂಜಯ ವೃತ್ತದಲ್ಲಿ ಜನಸ್ತೋಮ ಉದ್ದೇಶಿಸಿ ಮಾತನಾಡಿದ ಮೈತ್ರಿ ಅಭ್ಯರ್ಥಿ ಎಚ್ ಡಿ ಕುಮಾರಸ್ವಾಮಿ ಆಳುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!