Saturday, September 21, 2024

ಪ್ರಾಯೋಗಿಕ ಆವೃತ್ತಿ

ನಾಗಮಂಗಲ ಗಲಭೆ | ತಲೆ ಮರೆಸಿಕೊಂಡಿದ್ದ ಯುವಕ ‘ಬ್ರೈನ್ ಸ್ಟೋಕ್’ಗೆ ಬಲಿ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಗಲಭೆ ಪ್ರಕರಣದಲ್ಲಿ ತಮ್ಮನ್ನೂ ಬಂಧಿಸಬಹುದೆಂಬ ಭಯದಲ್ಲಿ ಊರು ತೊರೆದಿದ್ದ ಯುವಕ ಕಿರಣ್ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಆತ ‘ಬ್ರೈನ್ ಸ್ಟೋಕ್ ಸ್ಟೋಕ್ ನಿಂದ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಗಲಭೆ ಪ್ರಕರಣದಲ್ಲಿ ಈವರೆಗೆ ಪೊಲೀಸರು 52 ಮಂದಿಯನ್ನು ಬಂಧಿಸಿದ್ದಾರೆ. ಅವರಲ್ಲಿ ಬದ್ರಿಕೊಪ್ಪಲು ಗ್ರಾಮದ 13 ಮಂದಿ ಸೇರಿದ್ದಾರೆ. ಇದೇ ಗ್ರಾಮದ ಕಿರಣ್ ಎಂಬವರೂ ಸೆಪ್ಟೆಂಬರ್ 11ರ ರಾತ್ರಿ ನಡೆದ ಗಲಭೆಯಲ್ಲಿ ಭಾಗಿಯಾಗಿದ್ದರು ಎಂದು ತಿಳಿದು ಬಂದಿದೆ.

ಬಂಧನ ಭೀತಿಯಿಂದ ಕಿರಣ್ ತಮ್ಮ ಗ್ರಾಮವನ್ನು ತೊರೆದು, ತಲೆಮರೆಸಿಕೊಂಡಿದ್ದರು. ಇದೀಗ, ಅವರು ಬ್ರೈನ್ ಸ್ಟೋಕ್ ನಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ತಂದೆಯೂ ಆರೋಪಿ

ಕಿರಣ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಾಗಮಂಗಲ ಗಲಭೆ ಪ್ರಕರಣದಲ್ಲಿ ಕಿರಣ್ ಅವರ ತಂದೆ 17ನೇ ಆರೋಪಿಯಾಗಿದ್ದು, ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನ ಭೀತಿಯಿಂದ 25ಕ್ಕೂ ಹೆಚ್ಚು ಮಂದಿ ತಮ್ಮೂರುಗಳನ್ನು ತೊರೆದಿದ್ದು, ತಲೆಮರೆಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!