ಶ್ರೀರಂಗಪಟ್ಟಣಕ್ಕೆ ಪೂಜೆ ಸಲ್ಲಿಸಲು ಬಂದಿದ್ದ ಯುವಕನೊಬ್ಬ ಕಾಲು ಜಾರಿ ಕಾವೇರಿ ನದಿಗೆ ಬಿದ್ದು ಕೊಚ್ಚಿ ಹೋದ ಘಟನೆ ಇಂದು ಬೆಳಿಗ್ಗೆ ಸಂಗಮದ ಬಳಿ ನಡೆದಿದೆ.
ಬೆಂಗಳೂರಿನ ಯಲಹಂಕ ನಿವಾಸಿ ಅಶೋಕ್ (26) ಸಾವನ್ನಪ್ಪಿದ ಯುವಕ.ಕುಟುಂಬಸ್ಥರು ಮತ್ತು ಸ್ನೇಹಿತರೊಂದಿಗೆ ಪೂಜೆಗಾಗಿ ಕಾವೇರಿಯ ಸಂಗಮಕ್ಕೆ ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಕಾವೇರಿ ನದಿಯಲ್ಲಿ ಭಾರೀ ನೀರಿನ ಹರಿವು ಇರುವುದರಿಂದ ಕಾಲು ಜಾರಿ ಬಿದ್ದ ಅಶೋಕ್ ನೀರಿನ ಎಳೆತಕ್ಕೆ ಸಿಕ್ಕು ಕೊಚ್ಚಿ ಹೋಗಿದ್ದಾನೆ.
ನದಿಯಲ್ಲಿ ನೀರಿನ ರಭಸದ ಬಗ್ಗೆ ಯಾವುದೇ ಎಚ್ಚರಿಕೆಯ ಬೋರ್ಡ್ ಹಾಕಿಲ್ಲವೆಂದು ಅಧಿಕಾರಿಗಳ ವಿರುದ್ಧ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಗಮದ ಬಳಿಕ ಯುವಕ ಅಶೋಕ್ ಕುಟುಂಬಸ್ಥರ ಅಕ್ರಂದನ ಮುಗಿಲು ಮುಟ್ಟಿದೆ.ಕೊಚ್ಚಿ ಹೋದ ಅಶೋಕ್ಗಾಗಿ ಅಗ್ನಿಶಾಮಕ ದಳದವರು ಬೋಟ್ ಮೂಲಕ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.