‘ರೀಲ್ಸ್’ ಮಾಡಲು ಹೋಗಿ ಯುವಕನೊಬ್ಬ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಕರಾವಳಿಯ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರುವ ಮೂಲಕ ತಗ್ಗು ಪ್ರದೇಶಗಳು ಜಲಾವೃತಗೊಳ್ಳುತ್ತಿವೆ. ಇದರಿಂದ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತಗಳು ಸಾರ್ವಜನಿಕರಲ್ಲಿ ಮನವಿ ಮಾಡಿದ್ದರೂ ಕೆಲವು ಯುವಕರು ಅದ್ಯಾವುದಕ್ಕೂ ಕ್ಯಾರೇ ಎನ್ನುತ್ತಿಲ್ಲ.
ಯುವಕನೋರ್ವ ರೀಲ್ಸ್ ಮಾಡಲು ಹೋಗಿ ಯುವಕನೊಬ್ಬ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿರುವ ಘಟನೆ ಉಡುಪಿಯಲ್ಲಿ ನಡೆದಿದೆ.
ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿ ಇರುವ ಅರಶಿನಗುಂಡಿ ಜಲಪಾತದಲ್ಲಿ ಈ ಘಟನೆ ನಡೆದಿದೆ. pic.twitter.com/JvtYAs1pLJ
— eedina.com (@eedinanews) July 24, 2023
“>
ಅತಿಯಾದ ಮಳೆ, ತುಂಬಿ ತುಳುಕುವ ಜಲಪಾತ ನೋಡಲು ಹೋದ ಯುವಕನೋರ್ವ ‘ರೀಲ್ಸ್’ ಮಾಡಲು ಹೋಗಿ ತನ್ನ ಪ್ರಾಣಕ್ಕೆ ಕುತ್ತು ತಂದುಕೊಂಡಿದ್ದಾನೆ.
ಜಲಪಾತದ ಬಳಿಯಲ್ಲಿನ ಬಂಡೆಕಲ್ಲಿನ ಮೇಲೆ ನಿಂತಿದ್ದ ವೇಳೆ ಆಯತಪ್ಪಿ, ಜಲಪಾತಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಬಳಿ ಇರುವ ಅರಶಿನಗುಂಡಿ ಜಲಪಾತದಲ್ಲಿ ಈ ಘಟನೆ ನಡೆದಿದೆ.
ಜಲಪಾತ ವೀಕ್ಷಣೆಗೆ ಬಂದಿದ್ದಾಗ ಈ ದುರಂತ ನಡೆದಿದ್ದು, ಯುವಕ ಜಲಪಾತದಲ್ಲಿ ಬೀಳುತ್ತಿರುವ ದೃಶ್ಯ ಮತ್ತೋರ್ವ ಯುವಕನ ಮೊಬೈಲ್ ನಲ್ಲಿ ಸೆರೆಯಾಗಿದೆ. ಇನ್ನು ಯುವಕನ ಮೃತದೇಹದ ಪತ್ತೆಗೆ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದೆ.