Wednesday, September 18, 2024

ಪ್ರಾಯೋಗಿಕ ಆವೃತ್ತಿ

ಬೆಂಗಳೂರು| ಅಪಘಾತದಲ್ಲಿ ಗರ್ಭಿಣಿಗೆ ಅಬರ್ಷನ್; ತಾಯಿಮಗು ಇಬ್ಬರು ಸಾವು

ಟಿಪ್ಪರ್ ಡಿಕ್ಕಿಯಾಗಿ ಗರ್ಭಿಣಿ ಹೊಟ್ಟೆಯಿಂದ ಹೊರಬಂದು ಮಗು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನಲ್ಲಿ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.

ಈ ಭೀಕರ ಅಪಘಾತದಲ್ಲಿ ಗರ್ಭಿಣಿ ಎಡೇಹಳ್ಳಿಯ ಸಿಂಚನಾ (30) ಕೂಡಾ ಸಾವನ್ನಪ್ಪಿದ್ದಾರೆ. ಸಿಂಚನಾ ಹೊಟ್ಟೆಯಲ್ಲಿದ್ದ 8 ತಿಂಗಳ ಮಗು ಹೊರಬಂದು ಒದ್ದಾಡಿ ಸಾವನ್ನಪ್ಪಿದೆ ಎಂದು ವರದಿಯಾಗಿದೆ.

ಸಿಂಚನಾ ಪತಿ ಮಂಜುನಾಥ್ ಜೀವಾಪಾಯದಿಂದ ಪಾರಾಗಿದ್ದಾರೆ. ಸಿಂಚನಾಗೆ ಆಗಸ್ಟ್​ 17ಕ್ಕೆ 8 ಮುಗಿದು 9 ತಿಂಗಳು ತುಂಬುತ್ತಿತ್ತು. ಹೆರಿಗೆ ಸುಸೂತ್ರವಾಗಿ ಆಗಲಿ ಎಂದು ದಂಪತಿ ಬೈಕ್​ನಲ್ಲಿ​​ ದಾಬಸ್​ ಪೇಟೆಯಲ್ಲಿರುವ ಶಿವಗಂಗೆಯ ಗಣಪತಿ ದೇವಸ್ಥಾನಕ್ಕೆ ತೆರಳಿದ್ದರು ಎನ್ನಲಾಗಿದೆ. ದಾರಿ ಮಧ್ಯ ಟಿಪ್ಪರ್​ ಡಿಕ್ಕಿ ಹೊಡೆದು ಗರ್ಭಿಣಿ ಮತ್ತು ಮಗು ಸಾವನ್ನಪ್ಪಿದೆ.

ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳದಲ್ಲೇ ಟಿಪ್ಪರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದು ಈ ಬಗ್ಗೆ ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!