Friday, September 20, 2024

ಪ್ರಾಯೋಗಿಕ ಆವೃತ್ತಿ

ಹುಬ್ಬಳ್ಳಿ| ಅಂಜಲಿ ಹತ್ಯೆ ಮಾಡಿದ್ದ ಆರೋಪಿ ವಿಶ್ವ ಬಂಧನ

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ಹತ್ಯೆ ಮಾಡಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಮಾಹಿತಿ ನೀಡಿರುವುದಾಗಿ ವರದಿಯಾಗಿದೆ.

ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ ಮೇ 15ರ ಮುಂಜಾನೆ 5.30 ಸುಮಾರಿಗೆ ಅಂಜಲಿ ಅಂಬಿಗೇರ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿ ಪರಾರಿಯಾಗಿದ್ದ. ಸದ್ಯ ಶೋಧ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ.

ಹಂತಕ ಪರಾರಿಯಾದ ಬಳಿಕ ಹಂತಕನ‌ ಪತ್ತೆಗಾಗಿ ಎರಡು ಪೊಲೀಸ್ ತಂಡ ರಚನೆ ಮಾಡಿದ್ದು,‌ ಒಂದು ತಂಡ ಮೈಸೂರು ಹಾಗೂ ಮತ್ತೊಂದು ತಂಡ ದಾವಣಗೆರೆಯಲ್ಲಿ ಹುಡುಕಾಟ ನಡೆಸುತ್ತಿತ್ತು.

ಗುರುವಾರ ರಾತ್ರಿ ದಾವಣಗೆರೆಯಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನು ಆರೋಪಿಯ ಬಳಿ ಯಾವುದೇ ಮೊಬೈಲ್ ಫೋನ್ ಇರಲಿಲ್ಲ ಮತ್ತು 15 ದಿನಗಳಿಂದ ಯಾವುದೇ ಮೊಬೈಲ್ ಫೋನ್ ಬಳಕೆ ಮಾಡಿಲ್ಲ ಎಂದು ವರದಿಯಾಗಿದೆ.

ವಿಶ್ವ ಕಳೆದ ಹಲವು ದಿನಗಳಿಂದ ತನ್ನನ್ನು ಪ್ರೀತಿಸುವಂತೆ ಅಂಜಲಿಯನ್ನು ಪೀಡಿಸುತ್ತಿದ್ದ. ಆದರೆ ಅಂಜಲಿ ಆತನ ಪ್ರೀತಿಯನ್ನು ನಿರಾಕರಿಸಿದ್ದಳು ಎಂದು  ಹೇಳಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!