ಮಂಡ್ಯ ನಗರಸಭೆ ಮಾಜಿ ಸದಸ್ಯ ನಾಗೇಶ್, ಜೆಡಿಎಸ್ ಪಕ್ಷದ ಭೈರಪ್ಪ ಅವರು ಬಿಜೆಪಿ ಸೇರಿದ್ದಾರೆ ಎಂದು ನಗರಸಭೆ ಸದಸ್ಯ, ಬಿಜೆಪಿ ಮುಖಂಡ ಎಂ.ಪಿ.ಅರುಣ್ಕುಮಾರ್ ತಿಳಿಸಿದರು.
ಬಿಜೆಪಿ ಸರ್ಕಾರದ ಕಾರ್ಯಸೂಚಿ, ಅಭಿವೃದ್ಧಿ ಕಾರ್ಯಗಳು, ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಾಯಕತ್ವವನ್ನು ಮೆಚ್ಚಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಜೆಡಿಎಸ್ ಅಲ್ಪಸಂಖ್ಯಾತರ ವಿಭಾಗದ ಮುಖಂಡ ಅಜರ್ ಪಾಷಾ, ಮತ್ತವರ ಬೆಂಬಲಿಗರಾದ ಸಯ್ಯದ್ ಇಬ್ರಾಹಿಂ, ಬರ್ಕಾಸ್, ಗೋಂದಳ್ಳಿ ಸಮುದಾಯದ ಮುಖಂಡ ಬಾಲಾಜಿರಾವ್ ಅವರೂ ಬಿಜೆಪಿ ಸೇರಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.
ನಗರಸಭೆ ಮಾಜಿ ಸದಸ್ಯ ನಾಗೇಶ್ ಮಾತನಾಡಿ, ನಾನು ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದು ನಗರಸಭೆ ಸದಸ್ಯರಾಗಿದ್ದಾಗ ಎಸ್.ಡಿ.ಜಯರಾಮ್ ಅವರು ಸಚಿವರಾಗಿ ಒಳ್ಳೆಯ ಕೆಲಸಗಳನ್ನು ಮಾಡಿದ್ದರು. ಹೀಗಾಗಿ ನಾನು ಅವರ ಅಭಿಮಾನಿಯಾಗಿದ್ದೆ. ಇದೀಗ ಅವರ ಪುತ್ರ ಅಶೋಕ್ ಅವರು ತಂದೆಯ ಹಾದಿಯಲ್ಲೇ ಸಾಗುತ್ತಿದ್ದು, ಬಿಜೆಪಿ ಸೇರಿದ್ದಾರೆ. ಅದರಂತೆ ನಾವೂ ಕೂಡ ಅವರನ್ನು ಹಿಂಬಾಲಿಸಿದ್ದೇವೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ನಗರಸಭೆ ಮಾಜಿ ಸದಸ್ಯ ಕೆ.ಎಲ್.ನಾಗೇಂದ್ರ ಇತರರು ಉಪಸ್ಥಿತರಿದ್ದರು.