Thursday, September 19, 2024

ಪ್ರಾಯೋಗಿಕ ಆವೃತ್ತಿ

ಕೃಷಿ ಸೌಲಭ್ಯಗಳ ಸದುಪಯೋಗಕ್ಕೆ ಶಾಸಕ ಕರೆ

ಮಳೆಗಾಲಕ್ಕೆ ತಕ್ಕಂತೆ ಕೃಷಿಗೆ ಪೂರಕವಾದ ಸೌಲಭ್ಯಗಳನ್ನು ರೈತರು ಸರ್ಕಾರದಿಂದ ಪಡೆದು ಸದುಪಯೋಗ ಪಡಿಸಿಕೊಳ್ಳುವಂತೆ ಶಾಸಕ ಸುರೇಶ್ಗ್ ಗೌಡ ಕರೆ ನೀಡಿದರು.

ನಾಗಮಂಗಲ ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ಕೃಷಿ ರಥ ಅಭಿಯಾನಕ್ಕೆ ಚಾಲನೆ ನೀಡಿದರು.

ಸಮಗ್ರ ಮಾಹಿತಿಯುಳ್ಳ ಕೃಷಿ ಅಭಿಯಾನದ ರಥವು ತಾಲೂಕಿನಲ್ಲಿ ಸಂಚರಿಸುತ್ತಿದೆ. ಪ್ರತಿಯೊಬ್ಬ ರೈತರು ಸಕಾಲದಲ್ಲಿ ಬೆಳೆಗಳ ಅನುಕೂಲ ಮತ್ತು ಕೃಷಿ ಇಲಾಖೆಯ ಸೌಲಭ್ಯಗಳನ್ನು ಪಡೆಯುವಂತೆ ಮಾಹಿತಿ ನೀಡಲಾಗುತ್ತಿದೆ.

ರೈತರು ಸರ್ಕಾರದ ಸವಲತ್ತುಗಳ ಸದುಪಯೋಗದ ಜೊತೆಗೆ ಇಲಾಖೆಯಿಂದ ಬರುವ ಯೋಜನೆಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು .

ಇದೇ ಸಂದರ್ಭದಲ್ಲಿ ತಹಶೀಲ್ದಾರ್, ತಾಲ್ಲೂಕು ಕೃಷಿ ಇಲಾಖೆ ನಿರ್ದೇಶಕ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!