ಕರ್ನಾಟಕ ರಾಜ್ಯ ಕೃಷಿ ಪರಿಕರ ಮಾರಾಟಗಾರರ ಸಂಘದ ಉಪಾಧ್ಯಕ್ಷರಾಗಿ ಮಂಡ್ಯದ ಎಸ್.ನಾಗರಾಜು ಅವರು ಆಯ್ಕೆಯಾಗಿದ್ದಾರೆ.
ದಾವಣಗೆರೆಯಲ್ಲಿ ನಡೆದ ಕರ್ನಾಟಕ ರಾಜ್ಯದ ಕೃಷಿ ಪರಿಕರ ಮಾರಾಟಗಾರರ ಪ್ರತಿನಿಧಿಗಳ ಸಭೆಯಲ್ಲಿ ಮಂಡ್ಯ ಜಿಲ್ಲೆಯ ಬಿತ್ತನೆ ಬೀಜ, ಕೀಟನಾಶಕ, ರಸಗೊಬ್ಬರ ಮಾರಾಟಗಾರರ ಸಂಘದ ಅಧ್ಯಕ್ಷ ಎಸ್.ನಾಗರಾಜು ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ.
ಎಸ್.ನಾಗರಾಜು ಅವರ ಸೇವೆಯನ್ನು ಗುರುತಿಸಿ ಉಪಾಧ್ಯಕ್ಷರನ್ನಾಗಿ ಮಾಡಿದ ಹಿನ್ನೆಲೆಯಲ್ಲಿ ಅವರನ್ನು ಅಭಿನಂದಿಸಲಾಯಿತು.