ರಾಜ್ಯದ ಉನ್ನತ ಶಿಕ್ಷಣದ ಹಲವು ಸಮಸ್ಯೆಗಳಿಗೆ ಕೂಡಲೇ ಸೂಕ್ತ ಪರಿಹಾರ ಒದಗಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಅವರನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಶನ್ (AIDSO) ರಾಜ್ಯ ನಿಯೋಗವು ಇಂದು ಭೇಟಿ ಮನವಿ ಸಲ್ಲಿಸಿತು.
ಎನ್.ಇ.ಪಿ ಜಾರಿಯಿಂದ ಉಂಟಾಗಿರುವ ಗೊಂದಲಗಳು, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ, ಯು.ವಿ.ಸಿ.ಇ. ಮುಂತಾದ ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳು ಎದುರಿಸುತ್ತಿರುವ ಸವಾಲುಗಳು, ಹಾಸ್ಟೆಲ್ ಸಮಸ್ಯೆಗಳು, ವಿದ್ಯಾರ್ಥಿವೇತನ ವಿಳಂಬ, ಮುಂತಾದ ಹಲವು ಸಮಸ್ಯೆಗಳ ಬಗ್ಗೆ ಚರ್ಚಿಸಿ, ನಮ್ಮ ಅಭಿಪ್ರಾಯಗಳನ್ನು ಅವರ ಮುಂದೆ ಮಂಡಿಸಲಾಯಿತು.
ರಾಜ್ಯ ಸರ್ಕಾರವು ಉನ್ನತ ಶಿಕ್ಷಣ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳನ್ನು ಆದಷ್ಟು ಬೇಗ ಬಗೆಹರಿಸುತ್ತದೆ ಎಂದು ರಾಜ್ಯದ ವಿದ್ಯಾರ್ಥಿಗಳು ಭರವಸೆ ಇಟ್ಟಿದ್ದೇವೆ AIDSO ತಿಳಿಸಿದೆ. ಈ ನಿಯೋಗದಲ್ಲಿ ರಾಜ್ಯ ಖಜಾಂಚಿ ಅಭಯಾ ದಿವಾಕರ್ ಹಾಗೂ ರಾಜ್ಯ ಸೆಕ್ರೆಟರಿಯಟ್ ಸದಸ್ಯರಾದ ಅಪೂರ್ವ ಇದ್ದರು ಎಂದು AIDSO ಜಿಲ್ಲಾ ಸಂಚಾಲಕಿ ಚಂದ್ರಕಲಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.