Thursday, September 19, 2024

ಪ್ರಾಯೋಗಿಕ ಆವೃತ್ತಿ

ಐಕನಹಳ್ಳಿ ಗ್ರಾಪಂಗೆ ಅಧ್ಯಕ್ಷರಾಗಿ ಅಂಕನಹಳ್ಳಿ ಮಂಜೇಗೌಡ ಆಯ್ಕೆ

ಐಕನಹಳ್ಳಿ ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ಅಂಕನಹಳ್ಳಿ ಮಂಜೇಗೌಡ ಅವಿರೋಧವಾಗಿ ಆಯ್ಕೆಯಾದರು.

ಕೃಷ್ಣರಾಜಪೇಟೆ ತಾಲೂಕಿನ ಕಿಕ್ಕೇರಿ ಹೋಬಳಿಯ ಐಕನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ತೆರವಾಗಿದ್ದ ಹಿನ್ನಲೆಯಲ್ಲಿ ಇಂದು ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಯಿತು. ಅಂಕನಹಳ್ಳಿ ಮಂಜೇಗೌಡರನ್ನು ಹೊರತು ಪಡಿಸಿ ಮತ್ಯಾರು ನಾಮಪತ್ರ ಸಲ್ಲಿಸದ ಕಾರಣ ಅಂಕನಹಳ್ಳಿ ಮಂಜೇಗೌಡರನ್ನು ನೂತನ ಅಧ್ಯಕ್ಷರೆಂದು ಚುನಾವಣಾಧಿಕಾರಿ ಘೋಷಿಸಿದರು.

ಇದೇ ಸಂದರ್ಭದಲ್ಲಿ ಅಂಕನಹಳ್ಳಿ ಗ್ರಾಮಸ್ಥರು ಹಾಗೂ ಮಂಜೇಗೌಡರ ಬೆಂಬಲಿಗರು ಪಟಾಕಿ ಸಿಡಿಸಿ ಸಿಹಿ ಹಂಚಿ ನೂತನ ಅಧ್ಯಕ್ಷರಿಗೆ ಶುಭ ಕೋರಿದರು..

ನಂತರ ಹೇಮಾವತಿ ಸಕ್ಕರೆ ಕಾರ್ಖಾನೆಯ ಮಾಜಿ ನಿರ್ದೇಶಕ ಬಿ.ಎಸ್. ಮಂಜುನಾಥ್ ಮಾತನಾಡಿ, ಸರ್ವ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಪ್ರತಿಯೊಂದು ಗ್ರಾಮಗಳಿಗೆ ಪ್ರಮುಖವಾಗಿ ಬೇಕಾಗುವ ಮೂಲಭೂತ ಸೌಕರ್ಯಗಳನ್ನ ಒದಗಿಸಿ ಗ್ರಾಮಗಳ ಅಭಿವೃದ್ಧಿ ಶ್ರಮಿಸುವಂತೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಜೆ.ಡಿ.ಎಸ್ ಪಕ್ಷದ ಕಿಕ್ಕೇರಿ ಹೋಬಳಿ ಘಟಕದ ಅಧ್ಯಕ್ಷರಾದ ಕಾಯಿ ಮಂಜೇಗೌಡ್ರು, ಎ.ಪಿ.ಎಂ.ಸಿ‌ ಮಾಜಿ ಅಧ್ಯಕ್ಷ ಐನೋರಹಳ್ಳಿ ಮಲ್ಲೇಶ್ ತಾಲ್ಲೂಕು‌ ಪಂಚಾಯತಿ‌ ಮಾಜಿ ಸದಸ್ಯ ಕೃಷ್ಣೇಗೌಡ, ಮುಖಂಡರಾದ ಉದಯಶಂಕರ್, ಬಾಲಚಂದ್ರ, ಬಿ ರಾಮೇಗೌಡ್ರು. ಗ್ರಾಮ‌ ಪಂಚಾಯತಿ ಉಪಾದ್ಯಕ್ಷರಾದ ಸುವರ್ಣ, ಸದಸ್ಯರಾದ ನಂಜುಂಡೇಗೌಡ, ಅಂಬುಜಾ, ಈರಾಜು, ಕುಮಾರ್, ದೇವರಾಜು, ನಾಗಮಣಿ, ಪ್ರಸನ್ನ, ಪಲ್ಲವಿ, ಭಾಗ್ಯಮ್ಮ, ಶಂಕರ್, ಸುಧಾ, ಸುಮಿತ್ರಾ, ಕವಿತಾ ಮತ್ತು ಗ್ರಾಮ ಪಂಚಾಯತಿಯ ಪಿ.ಡಿ.ಓ ವಿಜಯಕುಮಾರ್ ಸೇರಿದಂತೆ ನೂರಾರು ಮುಖಂಡರು ಇದ್ದರು..

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!