ವಿಪಕ್ಷ ನಾಯಕ ಸ್ಥಾನ ಕೈತಪ್ಪಿದ ಹಿನ್ನೆಲೆ ಶಾಸಕ ಯತ್ನಾಳ್ ಮುನಿಸಿಕೊಂಡಿದ್ದು ಮುಂದೆ ಬಿಜೆಪಿಯಲ್ಲಿ ಎಲ್ಲವು ಸರಿ ಹೋಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು.
ನಾಗಮಂಗಲದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಎಲ್ಲದಕ್ಕೂ ಉತ್ತರ ನೀಡಲಿದ್ದೇವೆ. ಇಂದು ಮಂಡ್ಯ ಮೈಸೂರು ಪ್ರವಾಸ ಹಮ್ಮಿಕೊಂಡಿದ್ದೇನೆ.
ಎಲ್ಲಾ ಮಠಗಳಿಗೆ ಹಾಗೂ ಭೂತ್ ಮಟ್ಟದ ಅಧ್ಯಕ್ಷರ ಮನೆಗೆ ಭೇಟಿ ಕೊಡಲಿದ್ದೇನೆ. ಕಾರ್ಯಕರ್ತರೆ ನಮ್ಮ ಪಕ್ಷದ ಆಸ್ತಿ ಹೀಗಾಗಿ ಕಾರ್ಯಕರ್ತರ ನಡೆಸಲಿದ್ದೇನೆ.
ಎಲ್ಲಾ ಕಾರ್ಯಕರ್ತರನ್ನ ವಿಶ್ವಾಸಕ್ಕೆ ತೆಗೆದುಕೊಂಡು ನರೇಂದ್ರ ಮೋದಿ ಅವ್ರ ಕೈ ಬಲ ಪಡಿಸಲಿದ್ದೇವೆ ಎಂದರು.