Friday, September 20, 2024

ಪ್ರಾಯೋಗಿಕ ಆವೃತ್ತಿ

ಸಚಿವ ಶಿವಾನಂದ ಪಾಟೀಲ್ ವಿರುದ್ದ ಭಿಕ್ಷಾ ಪಾತ್ರೆ ಹಿಡಿದು ರೈತರ ಪ್ರತಿಭಟನೆ

ರೈತರು ಪರಿಹಾರದ ಹಣಕ್ಕಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಹೇಳಿಕೆ ನೀಡಿರುವ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಖಂಡಿಸಿ, ಮದ್ದೂರು ತಾಲ್ಲೂಕಿನ ಬೆಸಗರಹಳ್ಳಿಯಲ್ಲಿ ರೈತರು ಭಿಕ್ಷಾ ಪಾತ್ರೆ ಹಿಡಿದು ಶುಕ್ರವಾರ ವಿನೂತನ ಪ್ರತಿಭಟನೆ ನಡೆಸಿದರು.

ಸಚಿವ ಶಿವಾನಂದ ಪಾಟೀಲ್ ಭಾವಚಿತ್ರದ  ಪ್ಲೆಕ್ಸ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ರೈತಸಂಘದ ಕಾರ್ಯಕರ್ತರು, ಬಾಯಿ ಬಡಿದುಕೊಂಡು ಪ್ರತಿಭಟಿಸಿದಲ್ಲದೇ, ಭಿಕ್ಷಾ ಪಾತ್ರೆ ಹಿಡಿದು ಭಿಕ್ಷೆ ಬೇಡುವ ಮೂಲಕ ಆಕ್ರೋಶ ಹೊರ ಹಾಕಿದರು. ಸಚಿವರು ಆತ್ಮಹತ್ಯೆ ಮಾಡಿಕೊಂಡರೇ ರೈತರು ಭಿಕ್ಷೆ ಎತ್ತಿ ಪರಿಹಾರ ಕೊಡ್ತೀವಿ ಎಂದು ಅಣಕಿಸಿದರು.

ಕೆ.ಆರ್.ಎಸ್ ನಿಂದ  ಕಾವೇರಿಕೊಳ್ಳದ ಜಲಾಶಯಗಳಿಗೆ ನೀರು ಹರಿಸುತ್ತಿರುವ ಸರ್ಕಾರದ ಕ್ರಮ ಖಂಡಿಸಿ ರೈತಸಂಘವು ಕರೆ ನೀಡಿದ್ದ ಬೆಸಗರಹಳ್ಳಿ ಬಂದ್ ಗೆ ಅಲ್ಲಿನ ಸಾರ್ವಜನಿಕರು ಬೆಂಬಲ ವ್ಯಕ್ತಪಡಿಸಿದರು.

ವ್ಯಾಪಾರಿಗಳು ಅಂಗಡಿ ಮುಂಗಟ್ಟುಗಳ ಬಾಗಿಲು ಮುಚ್ಚಿ, ವ್ಯಾಪಾರ ವಹಿವಾಟು ಸಂಪೂರ್ಣ ಸ್ಥಗಿತಗೊಳಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!