ರೆಬಲ್ ಸ್ಟಾರ್ ಅಂಬರೀಶ್ ಅವರ 4ನೇ ವರ್ಷದ ಪುಣ್ಯಸ್ಮರಣೆಯ ಹಿನ್ನಲೆಯಲ್ಲಿ ಇಂದು ಸುಮಲತಾ ಅಂಬರೀಶ್ ಪತಿ ಅಂಬರೀಶ್ ಸಮಾಧಿಗೆ ಪೂಜೆ ಸಲ್ಲಿಸಿದರು.
ಮದ್ದೂರು ತಾಲ್ಲೂಕಿನ ದೊಡ್ಡರಸಿನಕೆರೆ ಗ್ರಾಮಕ್ಕೆ ನಟರಾದ ದೊಡ್ಡಣ್ಣ, ರಾಕ್ ಲೈನ್ ವೆಂಕಟೇಶ್, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಬೇಲೂರು ಸೋಮಶೇಖರ್ ಮತ್ತಿತರರ ಜೊತೆ ಆಗಮಿಸಿದ ಸಂಸದೆ ಸುಮಲತಾ ಅವರು ಅಂಬರೀಶ್ ಸಮಾಧಿಗೆ ಪೂಜೆ ಸಲ್ಲಿಸಿ ಸ್ಮರಿಸಿದರು.
ಅಂಬರೀಶ್ ಅವರ ನಾಲ್ಕನೇ ಪುಣ್ಯ ಸ್ಮರಣೆ ಅಂಗವಾಗಿ ದೊಡ್ಡರಸಿನಕೆರೆ ಗ್ರಾಮಸ್ಥರು ಅನ್ನ ಸಂತರ್ಪಣೆ ಮಾಡಿದರು.
ಇಂದು ಬೆಳಿಗ್ಗೆಯಿಂದಲೇ ಅಂಬರೀಶ್ ಅಭಿಮಾನಿಗಳು ಹಾಗೂ ದೊಡ್ಡರಸಿನಕೆರೆ ಸುತ್ತಮುತ್ತಲ ಗ್ರಾಮಸ್ಥರು ಅಂಬರೀಶ್ ಸಮಾಧಿಗೆ ಪೂಜೆ ಸಲ್ಲಿಸಿ ಮೆಚ್ಚಿನ ನಟನ ಸ್ಮರಣೆ ಮಾಡಿದರು.