ಕೋಲಾರದ ನಗರಸಭಾ ಸದಸ್ಯ ಅಂಬರೀಷ್ ಎಂಬ ವ್ಯಕ್ತಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಧಿಕ್ಕಾರ ಕೂಗಿರುವುದನ್ನು ಖಂಡಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿತು.
ದಸಂಸ ವೆಂಕಟಗಿರಿಯಯ್ಯ ಅವರ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಕೋಲಾರದ ನಗರಸಭಾ ಸದಸ್ಯ ಅಂಬರೀಷನನ್ನು ಕೂಡಲೇ ಸದಸ್ಯತ್ವದಿಂದ ವಜಾಗೊಳಿಸಬೇಕೆಂದು ಆಗ್ರಹಿಸಿದರು.
ಒಬ್ಬ ಚುನಾಯಿತ ಪ್ರತಿನಿಧಿಯಾಗಿ ಆತ ತನ್ನ ಜವಾಬ್ದಾರಿ ಮರೆತು ಅಂಬೇಡ್ಕರ್ ವಿರುದ್ಧವಾಗಿ ಘೋಷಣೆ ಕೂಗಿರುವುದು ಖಂಡನೀಯ, ಆತನನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ದಸಂಸ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ, ಮುಖಂಡರಾದ ಆನಂದ ಬಿ ಮತ್ತಿತರರು ಭಾಗವಹಿಸಿದ್ದರು.