ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಅಖಿಲ ಭಾರತ ಡಾ. ಬಿ.ಆರ್ ಅಂಬೇಡ್ಕರ್ ಸೈನ್ಯ ಈ ಬಾರೀ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸುತ್ತದೆ ಎಂದು ಜಿ.ಪಂ ಮಾಜಿ ಸದಸ್ಯ ಜಯರಾಜು ತಿಳಿಸಿದರು.
ಮಳವಳ್ಳಿ ಪಟ್ಟಣದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಬಿಜೆಪಿ ಹಾಗೂ ಮಿತ್ರ ಪಕ್ಷ ಸಂವಿಧಾನ ವಿರೋಧಿಯಾಗಿದ್ದು,ಅದಕ್ಕಾಗಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಮತ ನೀಡಬೇಕು ಎಂದರು.
ಗೋಷ್ಠಿಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಸೈನ್ಯ ಜಿಲ್ಲಾದ್ಯಕ್ಷ ಬಂಡೂರುಸಿದ್ದರಾಜು, ತಾಲ್ಲೂಕು ಅಧ್ಯಕ್ಷ ನಾಗೇಶ, ಚುಂಚಣ್ಣ, ನಂಜುಂಡಸ್ವಾಮಿ, ಚಂದ್ರಶೇಖರ್,ಮಹದೇವಯ್ಯ ಸೇರಿದಂತೆ ಹಲವರು ಇದ್ದರು.