Saturday, May 18, 2024

ಪ್ರಾಯೋಗಿಕ ಆವೃತ್ತಿ

ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರೆಗೆ 82 ಯಾತ್ರಾರ್ಥಿಗಳು

ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಫಲಾನುಭವಿಗಳು ಸೇರಿದಂತೆ ಇತರೆ ಅಂಬೇಡ್ಕರ್ ಅನುಯಾಯಿಗಳನ್ನು ಮಹಾರಾಷ್ಟ್ರದ ನಾಗಪುರದ ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರೆಗೆ ಒಟ್ಟು 82 ಯಾತ್ರಾರ್ಥಿಗಳು ಪ್ರಯಾಣ ಬೆಳೆಸಿದರು.

ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ರಂಗೇಗೌಡ ಅವರು ಇಂದು ಬೆಂಗಳೂರು ಮೈಸೂರು ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಿದ್ಯಾರ್ಥಿನಿಲಯದ ಮುಂಭಾಗ ಯಾತ್ರೆ ಹಸಿರು ನಿಶಾನೆ ತೋರಿದರು.

ಮಂಡ್ಯದಿಂದ 64 ಯಾತ್ರಾರ್ಥಿಗಳು ಹಾಗೂ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ 18 ಯಾತ್ರಾರ್ಥಿಗಳು ಸೇರಿ ಒಟ್ಟು 82 ಮಂದಿ 2 ಐರಾವತ ಬಸ್ ನಲ್ಲಿ ಮಹಾರಾಷ್ಟ್ರದ ನಾಗಪುರದ ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರೆಗೆ ಕಳುಹಿಸಿಕೊಡಲಾಯಿತು. ಸರ್ಕಾರವು 5 ಲಕ್ಷಗಳಲ್ಲಿ ಎರಡು ಐರಾವತ ಬಸ್ ಗಳನ್ನು ಬಾಡಿಗೆಗೆ ಪಡೆದು ಯಾತ್ರಾರ್ಥಿಗಳಿಗೆ ವ್ಯವಸ್ಥೆ ಮಾಡಿದೆ.

ಇದೇ ಸಂದರ್ಭದಲ್ಲಿ ಹಿಂದುಳಿದ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಶ್ರೀನಿವಾಸ್, ಸಮಾಜ ಕಲ್ಯಾಣ ಇಲಾಖೆಯ ನೌಕರರಾದ ಜನಾರ್ಧನ, ರಾಜೇಂದ್ರ ಪ್ರಸಾದ್, ಮುಖಂಡರಾದ ನಾಗರಾಜು, ಕೃಷ್ಣ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!