ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಡಾ.ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ರಾಜ್ಯದಿಂದ ಅಕ್ಟೋಬರ್ 3 ರಿಂದ 5 ರವರೆಗೆ ಮಹಾರಾಷ್ಟ್ರ ರಾಜ್ಯದ ನಾಗಪುರದ ದೀಕ್ಷಾ ಭೂಮಿಯಲ್ಲಿ ನಡೆಯುವ ಧಮ್ಮ ಚಕ್ರ ಪ್ರವರ್ತನ ದಿನ ಕಾರ್ಯಕ್ರಮಕ್ಕೆ ಭೇಟಿ ನೀಡಲು ಅರ್ಹ ಯಾತ್ರಾರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಒಬ್ಬರಿಗೆ ಒಟ್ಟು ರೂ.5 ಸಾವಿರ ರೂ.ಗಳ ಧನಸಹಾಯ ನೀಡಿ ಕಳುಹಿಸಿಕೊಡಲಾಗುವುದು, ಆಸಕ್ತಿಯುಳ್ಳ ಡಾ.ಬಿ.ಆರ್. ಅಂಬೇಡ್ಕರ್ ಅನುಯಾಯಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್ಸೈಟ್ http://www.sw.kar.nic.in ನಲ್ಲಿ https://www.deekshabhoomi.org/ಲಿಂಕ್ ಬಳಕೆ ಮಾಡಿ ಸೆಪ್ಟೆಂಬರ್ 16 ರಿಂದ 26 ರೊಳಗಾಗಿ ಅವಶ್ಯಕ ದಾಖಲೆಗಳೊಂದಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಯೋಮಿತಿ ಕನಿಷ್ಟ 18 ವರ್ಷ ಮೇಲ್ಪಟ್ಟಿರಬೇಕು. ಮಂಡ್ಯ ಜಿಲ್ಲೆಗೆ ನಿಗದಿಪಡಿಸಿದ 80 ಗುರಿಗಳಿಗಿಂತ ಹೆಚ್ಚಿನ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ, ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅರ್ಹರು. ಹಿಂದಿನ ವರ್ಷಗಳಲ್ಲಿ ಸರ್ಕಾರದ ವೆಚ್ಚದಲ್ಲಿ ಒಮ್ಮೆ ನಾಗಪುರದ ದೀಕ್ಷಾ ಭೂಮಿಗೆ ಪ್ರವಾಸ ಮಾಡಿದವರು 2ನೇ ಬಾರಿ ಈ ಸೌಲಭ್ಯಕ್ಕೆ ಅರ್ಹರಿರುವುದಿಲ್ಲ.
ಅರ್ಹ ಯಾತ್ರಾರ್ಥಿಗಳು ಆಕ್ಟೋಬರ್3 ರಿಂದ ಅಕ್ಟೋಬರ್ 5 ಅವಧಿಯಲ್ಲಿ ನಾಗರಪುರದ ದೀಕ್ಷಾ ಭೂಮಿಗೆ ಭೇಟಿ ನೀಡಿ ಮರಳಿ ಬಂದ ನಂತರ ದೀಕ್ಷಾ ಭೂಮಿ ಯಾತ್ರೆ ಕೈಗೊಂಡಿರುವುದಕ್ಕೆ ಪೂರಕ ದಾಖಲೆಗಳನ್ನು ಒದಗಿಸಿದ ನಂತರ ಉಳಿದ ಶೇ.50ರಷ್ಟು ಅಂದರೆ ರೂ.2,500 ರೂ.ಗಳನ್ನು ಪಾವತಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮಂಡ್ಯ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯ ಕೆ.ಆರ್ ಪೇಟೆ, ಮದ್ದೂರು,ಮಳವಳ್ಳಿ, ಮಂಡ್ಯ, ನಾಗಮಂ