Thursday, September 19, 2024

ಪ್ರಾಯೋಗಿಕ ಆವೃತ್ತಿ

ಕೊಡಗು ಬಳಿ ಭೀಕರ ಅಪಘಾತ : ಮಳವಳ್ಳಿಯ 6 ಮಂದಿ ದುರ್ಮರಣ

ಕೊಡಗು ಜಿಲ್ಲೆಯ ಸಂಪಾಜೆ ಬಳಿ ನಡೆದ ಕೆಎಸ್ಆರ್’ಟಿಸಿ ಬಸ್ ಹಾಗೂ ಕಾರು ನಡುವಿನ ಭೀಕರ ಅಪಘಾತದಲ್ಲಿ ಮಳವಳ್ಳಿ ತಾಲ್ಲೂಕಿನ ಭೀಮನಹಳ್ಳಿ ಗ್ರಾಮದ 6 ಮಂದಿ ದುರ್ಮರಣಕ್ಕೀಡಾಗಿರುವ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಈ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಇಬ್ಬರು ಮಹಿಳೆಯರು ಮತ್ತು ಇಬ್ಬರು ಪುರುಷರು ಸಾವನ್ನಪ್ಪಿದ್ದಾರೆ. ಭೀಮನಹಳ್ಳಿಯ ಮಹದೇವ, ಶೀಲಾ, ಎಸ್‌ಎಸ್‌ ಗೌಡ, ಜಿಎನ್.ಗೌಡ ಮೃತರು ಎಂದು ತಿಳಿದುಬಂದಿದೆ. ಮೃತ ಮಕ್ಕಳಲ್ಲಿ ಒಂದು ಮಗು 3 ವರ್ಷದ್ದು ಹಾಗೂ ಇನ್ನೊಂದು ಮಗು 6 ತಿಂಗಳ ಹಸುಗೂಸು ಎಂದು ತಿಳಿದುಬಂದಿದೆ.

ಇನ್ನು ತೀವ್ರ ಗಾಯಗೊಂಡ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರನ್ನೂ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊಡಗು ಜಿಲ್ಲೆಯ ಸಂಪಾಜೆ ಪೆಟ್ರೋಲ್ ಬಂಕ್ ಬಳಿ‌ ಇಂದು ಮಧ್ಯಾಹ್ನದ ವೇಳೆ ಕಾರು ಹಾಗೂ KSRTC ಬಸ್ ನಡುವೆ ಅಪಘಾತ ಸಂಭವಿಸಿದೆ. ಎರಡೂ ಅತೀ ವೇಗದಲ್ಲಿ ವಾಹನಗಳು ತೀವ್ರ ವೇಗವಾಗಿ ಬರುತ್ತಿದ್ದರಿಂದ ಅಪಘಾತದಿಂದ ಕಾರು ಸಂಪುರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಒಟ್ಟು 8 ಜನರು ಪ್ರಯಾಣ ಮಾಡುತ್ತಿದ್ದು, ಅದರಲ್ಲಿ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಉಳಿದಂತೆ ಐವರು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮೂವರು ಸಾವನ್ನಪ್ಪಿದ್ದಾರೆ. ಉಳಿದಂತೆ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದು, ಅವರಿಗೂ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!