Friday, September 20, 2024

ಪ್ರಾಯೋಗಿಕ ಆವೃತ್ತಿ

ಮದ್ದೂರು| ಬೈಕಿಗೆ ಗೂಡ್ಸ್ ವಾಹನ ಡಿಕ್ಕಿ: ಓರ್ವ ಸಾವು

ವರದಿ‌: ಪ್ರಭು ವಿ ಎಸ್

ದ್ವಿಚಕ್ರ ವಾಹನಕ್ಕೆ ಗೂಡ್ಸ್ ವಾಹನ ಡಿಕ್ಕಿ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಟು ಮತ್ತೋರ್ವ ಗಾಯಗೊಂಡಿರುವ ಘಟನೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿ‌ ‌ಬಳಿಯ ಮೈಸೂರು- ಬೆಂಗಳೂರು ಹೆದ್ದಾರಿಯ ಸರ್ವಿಸ್ ರಸ್ತೆಯಲ್ಲಿ ಮಂಗಳವಾರ ರಾತ್ರಿ ಜರುಗಿದೆ.

ಮದ್ದೂರು ತಾಲೂಕಿನ ರುದ್ರಾಕ್ಷಿಪುರ ಗ್ರಾಮದ ಮಂಜು ಅವರ ಪುತ್ರ ಅಜಯ್ ಕುಮಾರ್ (25) ಮೃತಪಟ್ಟ ವ್ಯಕ್ತಿಯಾಗಿದ್ದು ಹಿಂಬದಿ ಸವಾರ‌ ಮಂಡ್ಯ ನಗರದ ಮುಸ್ಲಿಂ ಬ್ಲ್ಯಾಕ್ ನಿವಾಸಿ ‌ಎಜಸ್‌ಖಾನ್‌ ರವರ ಪುತ್ರ ಇರ್ಫಾನ್ ಖಾನ್‌‌‌ ‌ ತೀವ್ರವಾಗಿ ಗಾಯಗೊಂಡ ವ್ಯಕ್ತಿಯಾಗಿದ್ದು ಜಿಲ್ಲಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾನೆ‌‌, ‌‌‌‌ ‌

ಮೃತ ಅಜಯ್ ಕುಮಾರ್ ಹಾಗೂ ಸ್ನೇಹಿತ ಇರ್ಫಾನ್ ಖಾನ್‌ ‌ ಮಂಡ್ಯದಿಂದ ಮದ್ದೂರು ಕಡೆಗೆ ತಮ್ಮ ದ್ವಿಚಕ್ರ ವಾಹನದಲ್ಲಿ ಆಗಮಿಸುತ್ತಿದ್ದ ವೇಳೆ ‌ ಮದ್ದೂರಿನಿಂದ ಎಳನೀರು ತುಂಬಿಕೊಂಡು ಮಂಡ್ಯ ಮಾರ್ಗದತ್ತ ಆಗಮಿಸುತ್ತಿದ್ದ ವೇಳೆ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ‌.

ಡಿಕ್ಕಿ ಹೊಡೆದ ರಭಸಕ್ಕೆ‌ ಅಜಯ್ ಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದು ಹಿಂಬದಿ ಸವಾರ ಇರ್ಫಾನ್ ಖಾನ್ ತೀವ್ರವಾಗಿ ಗಾಯಗೊಂಡ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆ ದಾಖಲಿಸಲಾಗಿದೆ. ಈ ಸಂಬಂಧ ಮದ್ದೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!