Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ವೀರಶೈವ ಲಿಂಗಾಯಿತ ಮಹಾಸಭಾ ಚುನಾವಣೆ: ಬೆಂಬಲಿಸಲು ಆನಂದ್ ಮನವಿ

ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ಮಂಡ್ಯ ಜಿಲ್ಲಾ ಘಟಕದ ಅಧ್ಯಕ್ಷರ ಮತ್ತು ಕಾರ್ಯಕಾರಿ ಮಂಡಳಿಯ ಚುನಾವಣೆಯು ಇದೇ ಜು.21ರ ಭಾನುವಾರ ನಡೆಯಲಿದ್ದು, ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ತಮ್ಮನ್ನು ಬೆಂಬಲಿಸುವಂತೆ ತಾಳಶಾಸನ ಆನಂದ್ ಎಸ್ ಮನವಿ ಮಾಡಿದ್ದಾರೆ.

ಮಂಡ್ಯ ಜಿಲ್ಲೆಯ ವೀರಶೈವ ಲಿಂಗಾಯಿತ ಸಮುದಾಯದ ಅಭಿವೃದ್ಧಿಗಾಗಿ ಅಳಿಲು ಸೇವೆ ಸಲ್ಲಿಸುವ ಸಲುವಾಗಿ ಅಖಿಲ ಭಾರತ ವೀರಶೈವ ಮಹಾಸಭೆಯ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಸಂಘ-ಸಂಸ್ಥೆಗಳ ಮತ್ತು ಸ್ವಾಮೀಜಿಗಳ ಆಶೀರ್ವಾದದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ. ಇದರ ಜೊತೆ ಕಾರ್ಯಕಾರಿ ಮಂಡಳಿಗೆ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಸೂಕ್ತ ಅಭ್ಯರ್ಥಿಗಳು ನನ್ನೊಂದಿಗೆ ಸ್ಪರ್ಧಿಸಿದ್ದು, ದಯಮಾಡಿ ವೀರಶೈವ ಲಿಂಗಾಯಿತ ಬಂಧುಗಳು ನಮ್ಮ ತಂಡವನ್ನು ಚುನಾಯಿಸಿ, ಬೆಂಬಲಿಸಬೇಕೆಂದು ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ ವೀರಶೈವ ಲಿಂಗಾಯಿತರು ಅಲ್ಪಸಂಖ್ಯಾರಾಗಿದ್ದು, ಸಂಘಟನೆ ಬಲಪಡಿಸುವ ಉದ್ದೇಶದಿಂದ ತಮ್ಮನ್ನು ಬೆಂಬಿಲಿಸುವಂತೆ ಮನವಿ ಮಾಡಿದರು.

 

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!