Thursday, September 19, 2024

ಪ್ರಾಯೋಗಿಕ ಆವೃತ್ತಿ

ಅನ್ನಭಾಗ್ಯ | ಅಕ್ಕಿ ಬದಲು ಹಣ ನೀಡಲು ನಿರ್ಧರಿಸಿದ ಸರ್ಕಾರ… ಇನ್ನೂ ನಿಮ್ಮ ಖಾತೆಗೆ ಹಣ ಬರೋದು ಗ್ಯಾರಂಟಿ

ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ನಾನಾ ಸಮಸ್ಯೆಗಳನ್ನು ಎದುರಿಸುತ್ತಿದೆ. ಕೇಂದ್ರ ಸರ್ಕಾರದ ಅಸಹಕಾರದಿಂದ ಅಕ್ಕಿ ದೊರೆಯುತ್ತಿಲ್ಲವೆಂದು ರಾಜ್ಯ ಸರ್ಕಾರ ಆರೋಪಿಸಿದೆ.

ಅಕ್ಕಿ ಕೊರತೆಯಿಂದಾಗಿ ಯೋಜನೆಯಡಿ ಪಡಿತರದಾರರಿಗೆ ತಲಾ 10 ಕೆ.ಜಿ ಅಕ್ಕಿ ನೀಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಕೊರತೆಯಾಗುವ ಅಕ್ಕಿಯ ಬದಲಾಗಿ ಹಣ ನೀಡಲಾಗುವುದೆಂದು ಸರ್ಕಾರ ಹೇಳಿದೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಸಚಿವ ಮುನಿಯಪ್ಪ, “ಅಕ್ಕಿ ಬದಲಾಗಿ ಹಣ ನೀಡುತ್ತೇವೆ. ಒಂದು ಕೆ.ಜಿ ಅಕ್ಕಿಗೆ 34 ರೂ. ನಿಗದಿ ಮಾಡಲಾಗಿದೆ. ಪಡಿತರದಾರರಿಗೆ ತಲಾ ಐದು ಕೆ.ಜಿ ಅಕ್ಕಿ ನೀಡಲಾಗುತ್ತದೆ. ಉಳಿದ ಐದು ಕೆ.ಜಿ ಅಕ್ಕಿಯ ಬದಲಿಗೆ, ಪ್ರತಿ ಕೆ.ಜಿಗೆ 34 ರೂ.ನಂತೆ ಹಣ ನೀಡುತ್ತೇವೆ” ಎಂದು ಹೇಳಿದ್ದಾರೆ.

“ಹಣ ನೀಡುವ ವ್ಯವಸ್ಥೆಯು ಅಕ್ಕಿ ಸಂಗ್ರಹವಾಗುವವರೆಗೂ ಚಾಲ್ತಿಯಲ್ಲಿರುತ್ತದೆ. ಅಗತ್ಯವಿರುವಷ್ಟು ಅಕ್ಕಿ ಸಿಕ್ಕ ಬಳಿಕ ಹಣ ನೀಡುವುದನ್ನು ನಿಲ್ಲಿಸಿ, ಅಕ್ಕಿಯನ್ನೇ ನೀಡುತ್ತೇವೆ” ಎಂದು ಅವರು ಹೇಳಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!