ಮಂಡ್ಯ ಜಿಲ್ಲಾ ಕಾಂಗ್ರೆಸ್ ವತಿಯಿಂದ ಭಾರತ್ ಜೋಡೋ ಯಾತ್ರೆ ವರ್ಷಾಚರಣೆ ಕಾರ್ಯಕ್ರಮ ನಡೆಯಿತು.
ಮಂಡ್ಯ ನಗರದ ಬಂದೀಗೌಡ ಬಡಾವಣೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಗಣಿಗ ರವಿಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಡಿ.ಗಂಗಾಧರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದರು.
ನಂತರ ಕಾಂಗ್ರೆಸ್ ಕಚೇರಿಯಿಂದ ಹೊರಟ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಉದ್ಯಾನವನದಲ್ಲಿರುವ ಗಾಂಧಿ ಪ್ರತಿಮೆಯ ಬಳಿ ಬಂದು ಸಂಭ್ರಮಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಗಣಿಗ ರವಿಕುಮಾರ್ ಮಾತನಾಡಿ, ನಮ್ಮ ನಾಯಕರಾದ ರಾಹುಲ್ ಗಾಂಧಿಯವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಸಿದ ಭಾರತ್ ಜೋಡೋ ಯಾತ್ರೆಗೆ ಒಂದು ವರ್ಷ ತುಂಬಿದ ಹಿನ್ನೆಲೆಯಲ್ಲಿ ವಾರ್ಷಿಕೋತ್ಸವ ಆಚರಿಸಲಾಗಿದೆ. ರಾಹುಲ್ ಗಾಂಧಿಯವರು ದೇಶ ಉಳಿಸುವ ಕರೆಗೆ ನಾವೆಲ್ಲಾ ಓಗೊಟ್ಟು ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ತೆ ಯಶಸ್ವಿಯಾಗಿ ಸಾಗುವಂತೆ ಮಾಡಿದ್ದೇವೆ. ರಾಹುಲ್ ಗಾಂಧಿಯವರು ನಡೆಸಿದ ಪಾದಯಾತ್ರೆಯಲ್ಲಿ ದೇಶದ ಬೇರೆ ಬೇರೆ ಭಾಗಗಳಿಂದ ಎಲ್ಲಾ ಜಾತಿ, ಧರ್ಮಗಳ ಜನರು ಭಾಗವಹಿಸಿ ಯಶಸ್ವಿಗೊಳಿಸಿದರು ಎಂದು ಸ್ಮರಿಸಿದರು.
ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್,ಎಂ.ಎಸ್. ಆತ್ಮಾನಂದ, ಕಾಂಗ್ರೆಸ್ ಕಾರ್ಯಾಧ್ಯಕ್ಷ ಚಿದಂಬರ್, ಮುಖಂಡರಾದ ಪ್ರಶಾಂತ್ ಬಾಬು, ಅಜ್ಜಹಳ್ಳಿ ರಾಮಕೃಷ್ಣ, ತ್ಯಾಗರಾಜ್, ವಿಜಯಲಕ್ಷ್ಮಿ ರಘುನಂದನ್, ಹನ್ಸಿಯಾಭಾನು, ಸಿ.ಆರ್.ರಮೇಶ್, ಸಿ.ಎಂ.ದ್ಯಾವಪ್ಪ, ವಿಜಯ್ ಕುಮಾರ್, ರುದ್ರಪ್ಪ, ದೀಪಕ್, ನಗರಸಭಾ ಸದಸ್ಯರಾದ ಪೂರ್ಣಿಮಾ, ರಾಮಲಿಂಗಯ್ಯ, ನಯೀಂ, ಶ್ರೀಧರ್, ಗೀತಾ, ಲಕ್ಷೀಕಾಂತ್ ಮತ್ತಿತರರಿದ್ದರು.