ಮಳವಳ್ಳಿ ಪಟ್ಟಣದಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮತ್ತು ಮಕ್ಕಳ ರಕ್ಷಣಾ ಹಕ್ಕುಗಳ ಆಯೋಗದ ವತಿಯಿಂದ ಮಕ್ಕಳ ಮೇಲಿನ ದೌರ್ಜನ್ಯ ವಿರೋಧಿಸಿ ಜನಜಾಗೃತಿ ಜಾಥಾ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ನಾಗಣ್ಣಗೌಡ ಚಾಲನೆ ನೀಡಿ ಮಾತನಾಡಿ, ಮಕ್ಕಳಿಗೆ ಕಷ್ಟ ಬಾರದ ರೀತಿ ಮುಂಜಾಗ್ರತೆ ವಹಿಸುವಿದಕ್ಕಾಗಿ ಜಾಗೃತಿ ಮೂಡಿಸಲು ರಾಜ್ಯ ವ್ಯಾಪ್ತಿ ಗ್ರಾ.ಪಂ. ಮಟ್ಟದಲ್ಲಿ ಜಾಥಾ ನಡೆಸಲಾಗುತ್ತಿದೆ ಎಂದರು
ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ, ಸಿಡಿಪಿಒ ಕುಮಾರ್, ಜಯಪ್ರಕಾಶ ಸೇರಿದಂತೆ ಹಲವರು ಉಪಸ್ಥಿತರಿದ್ದರು.