ಕಳೆದ 58 ದಿನಗಳಿಂದ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯು ಮಂಡ್ಯದಲ್ಲಿ ನಡೆಸುತ್ತಿರುವ ಹೋರಾಟವನ್ನು ಕೈ ಬಿಡುವಂತೆ ಶಾಸಕ ಪಿ.ರವಿಕುಮಾರ್ ಮನವಿ ಮಾಡಿದರು.
ಮಂಡ್ಯನಗರದ ಸರ್.ಎಂ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಹೋರಾಟದ ಸ್ಥಳದದಲ್ಲಿ ಬುಧವಾರ ನಡೆದ ಸಮಿತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ರೈತರ ಹಿತಕಾಯಲು ಸರ್ಕಾರ ಬದ್ದವಾಗಿದೆ ಎಂದು ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಕೆ.ಆರ್.ಎಸ್ ಅಣೆಕಟ್ಟೆಯಲ್ಲಿರುವ ನೀರನ್ನು ಉಳಿಸಿಕೊಳ್ಳುವ ಅವಶ್ಯಕತೆ ಇದೆ. ಎಲ್ಲಾ ಕರೆ ಕಟ್ಟೆ ತುಂಬಿಸಿ ರೈತರ ಬೆಳೆ ಉಳಿಸಿಕೊಳ್ಳುವ ಕೆಲಸ ಮಾಡ್ತೇವೆ. ಚಳವಳಿಯನ್ನು ಕೈ ಬಿಡಿ ಎಂದು ಕೋರಿದರು.
ಈ ವೇಳೆ ಕೆಲವು ಮುಖಂಡರು ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟವಾಗಿ ತಿಳಿಸಿಲ್ಲ, ಆದ್ದರಿಂದ ರೈತರ ಹಿತದೃಷ್ಠಿಯಿಂದ ಹೋರಾಟ ಮುಂದುವರೆಸಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.