ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಸ್ಟಾರ್ ಚಂದ್ರು (ವೆಂಕಟರಮಣೇಗೌಡ) ಅವರನ್ನು ವಕೀಲ ಸಮುದಾಯ ಬೆಂಬಲಿಸು
ವಂತೆ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮನವಿ ಮಾಡಿದರು.
ಮಂಡ್ಯನಗರದ ವಕೀಲರ ಸಂಘದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಪರವಾಗಿ ವಕೀಲರನ್ನು ಭೇಟಿ ಮಾಡಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಕೀಲರ ರಕ್ಷಣಾ ಕಾಯ್ದೆಯನ್ನು ಜಾರಿಗೆ ತಂದಿದ್ದೇವೆ. ವಕೀಲರ ಇನ್ನು ಹಲವಾರು ಸಮಸ್ಯೆಗಳನ್ನು ಮುಖ್ಯಮಂತ್ರಿಗಳು ರಾಜ್ಯಮಟ್ಟದ ವಕೀಲರ ಸಂಘದ ಜೊತೆ ಚರ್ಚಿಸಿ ಬಗೆಹರಿಸಲು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಹೇಳಿದರು.
ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಮಾತನಾಡಿ, ಮಂಡ್ಯ ನಗರದ ವಕೀಲರ ಸಂಘದಲ್ಲಿ ವಕೀಲರನ್ನು ಭೇಟಿ ಮಾಡಿ ಎಲ್ಲರೂ ಸಹಾಯ ಮಾಡಿ ಎಂದು ಕೇಳಿದ್ದೇನೆ, ವಕೀಲರು ಇದಕ್ಕೆ ಸ್ಪಂದಿಸಿ ನನಗೆ ಆಶೀರ್ವಾದ ಮಾಡಿ ಬೆಂಬಲಿಸುತ್ತೇನೆ ಎಂದು ತಿಳಿಸಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಾನು ಹೋದ ಕಡೆಯಲೆಲ್ಲ ಬೆಂಬಲ ಚೆನ್ನಾಗಿದೆ ಎಂದು ಹೇಳಿದರು.
ಹಣ ಇದ್ದರೆ ಮಾತ್ರ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಜನಬೆಂಬಲವಿದ್ದರೆ ಮಾತ್ರ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯ ಎಂದು ತಿಳಿಸಿದ ಅವರು ಕಾಂಗ್ರೆಸ್ ಪಕ್ಷ ನನ್ನನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ ಮೊದಲೆಲ್ಲ ತೆರೆ ಹಿಂದೆ ಇದ್ದೆ ಈಗ ತೆರೆ ಮುಂದೆ ಬಂದಿದ್ದೇನೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸುವಂತೆ ಮತದಾರರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷ ರಾಜೇಂದ್ರ, ಕಾರ್ಯದರ್ಶಿ ಸಿದ್ದರಾಜು, ಹಿರಿಯ ವಕೀಲ ಬಿ.ಬಸವರಾಜು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಕಾರ್ಯಧ್ಯಕ್ಷ ಎಂ.ಎಸ್.ಚಿದಂಬರ್, ವಕೀಲರಾದ ಸುಂಡಹಳ್ಳಿ ಮಂಜುನಾಥ್, ಗೌರಿಶಂಕರ್ ಸೇರಿದಂತೆ ಇತರರು ಈ ಸಂದರ್ಭದಲ್ಲಿ ಹಾಜರಿದ್ದರು.