Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಕಂಬದಹಳ್ಳಿ ಪುಟ್ಟಸ್ವಾಮಿ ನೇಮಕ

ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕಿನ ಆಡಳಿತ ಮಂಡಳಿಯ ನೂತನ ನಿರ್ದೇಶಕರನ್ನಾಗಿ ಮಂಡ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ಕಂಬದಹಳ್ಳಿ ಪುಟ್ಟಸ್ವಾಮಿ ಅವರನ್ನು ನಾಮ ನಿರ್ದೇಶನ ಮಾಡಿ ಸರ್ಕಾರವು ಆದೇಶ ಹೊರಡಿಸಿದೆ.

ಈ ಹಿಂದೆ ನೇಮಕವಾಗಿದ್ದ ಶ್ರೀರಂಗಪಟ್ಟಣ ಶಾಸಕ ಎ. ಬಿ. ರಮೇಶ ಬಂಡಿಸಿದ್ದೇಗೌಡ ಅವರ ನಾಮನಿರ್ದೇಶನವನ್ನು ರದ್ದುಪಡಿಸಿಸಲಾಗಿದ್ದು, ಆ ಸ್ಥಾನಕ್ಕೆ ಮಂಡ್ಯ ತಾಲ್ಲೂಕಿನ ಬಸರಾಳು ಹೋಬಳಿಯ ಪುಟ್ಟಸ್ವಾಮಿ ಬಿನ್ ಮೂಡಲಗಿರಿಗೌಡ ಅವರನ್ನು ಅಧಿಕಾರೇತರ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ನಾಮ ನಿರ್ದೇಶನ ಮಾಡಿ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ರಂಗನಾಥ ಜಿ ಆದೇಶ ಹೊರಡಿಸಿದ್ದಾರೆ.

ನೂತನ ನಿರ್ದೇಶಕ ಕಂಬದಹಳ್ಳಿ ಪುಟ್ಟಸ್ವಾಮಿ ಅವರು ತಮ್ಮ ನೇಮಕಕ್ಕೆ ಕಾರಣರಾದ ಮಂಡ್ಯ ಶಾಸಕ ರವಿಕುಮಾರ್ ಗಣಿಗ ಅವರನ್ನು ಹೂ ಮಾಲೆ ಹಾಕಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಹೆಚ್.ಬಿ.ರಾಮು, ತಾ.ಪಂ.ಮಾಜಿ ಅಧ್ಯಕ್ಷ ತ್ಯಾಗರಾಜು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!