Thursday, September 26, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯ| ದಿಶಾ ಸಮಿತಿಗೆ ಪುಟ್ಟರಾಜು ಸೇರಿದಂತೆ ನಾಲ್ವರ ನೇಮಕ

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಜಿಲ್ಲಾ ದಿಶಾ ಸಮಿತಿ ಸದಸ್ಯರನ್ನಾಗಿ ಮಂಡ್ಯ ಜಿಲ್ಲೆಯ ನಾಲ್ವರನ್ನು ನೇಮಿಸಿ ಕೇಂದ್ರ ಗ್ರಾಮೀಣಾಭಿವೃದ್ಧಿ, ಕೃಷಿ ಹಾಗೂ ರೈತ ಕಲ್ಯಾಣ ಸಚಿವ ಶಿವರಾಜ್‌ಸಿಂಗ್ ಚೌಹಾಣ್ ಆದೇಶ ಹೊರಡಿಸಿದ್ದಾರೆ.

ಕುಮಾರಸ್ವಾಮಿ ಅವರ ಮನವಿಯ ಮೇರೆಗೆ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಮಾಜಿ ಶಾಸಕ ಡಾ.ಕೆ.ಅನ್ನದಾನಿ, ಮಂಡ್ಯ ಮುಡಾ ಮಾಜಿ ಅಧ್ಯಕ್ಷೆ ವಿದ್ಯಾ ನಾಗೇಂದ್ರ ಹಾಗೂ ಕೆ.ಆರ್.ಪೇಟೆಯ ನರಸ ನಾಯಕ ಅವರನ್ನು ದಿಶಾ ಕಮಿಟಿ ಸದಸ್ಯರನ್ನಾಗಿ ನೇಮಿಸಲಾಗಿದೆ.

ಈ ನಾಲ್ಕು ಮಂದಿ ಸಹ ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಪ್ರತಿ ದಿಶಾ ಸಭೆಯಲ್ಲೂ ಭಾಗವಹಿಸಬಹುದಾಗಿದ್ದು, ಸಭೆಯಲ್ಲಿ ತಮ್ಮ ಸಲಹೆ, ಸಹಕಾರಗಳನ್ನು ಅಧಿಕಾರಿಗಳಿಗೆ ನೀಡಬಹುದಾದ ಅಧಿಕಾರ ಹೊಂದಿರುತ್ತಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!