Saturday, October 26, 2024

ಪ್ರಾಯೋಗಿಕ ಆವೃತ್ತಿ

ಚುನಾವಣಾ ವೀಕ್ಷಕರ ನೇಮಕ; ದೂರುಗಳಿದ್ದಲ್ಲಿ ಸಲ್ಲಿಸಿ: ಡಾ.ಕುಮಾರ

ಮಂಡ್ಯ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗವು ವೀಕ್ಷಕರನ್ನು ನೇಮಕ ಮಾಡಿದ್ದು, ಸಾರ್ವಜನಿಕರು ಚುನಾವಣೆಗೆ ಸಂಬಂಧಿಸಿದಂತೆ ದೂರುಗಳು ಅಥವಾ ಸಲಹೆಗಳಿದ್ದಲ್ಲಿ ಕರೆ ಮಾಡಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಎಲ್ಲಾ ವಿಧಾನಸಭಾ ವಲಯಗಳಿಗೆ ಸಾಮಾನ್ಯ ಚುನಾವಣಾ ವೀಕ್ಷಕರಾದ ನೀರಾಜ್ ಕುಮಾರ್ ಮೊಬೈಲ್ ಸಂಖ್ಯೆ 9035056471 ಹಾಗೂ ಇವರ ಸಮನ್ವಯಾಧಿಕಾರಿ ಕೈಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕ ರಂಗಸ್ವಾಮಿ ಮೊಬೈಲ್ ಸಂಖ್ಯೆ 9986239654 ಇವರನ್ನು ಸಂಪರ್ಕಿಸಬಹುದಾಗಿದೆ.

ಮಳವಳ್ಳಿ, ಮದ್ದೂರು, ಮಂಡ್ಯ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವೆಚ್ಚ ವೀಕ್ಷಕರಾದ ರೋಹಿತ್ ಅಸುದಾನಿ ಮೊಬೈಲ್ ಸಂಖ್ಯೆ 9035056472 ಹಾಗೂ ಇವರ ಸಮನ್ವಯಾಧಿಕಾರಿ ಕೆ.ಹೆಚ್.ಬಿ ಸಹಾಯಕ ಕಾರ್ಯಪಾಲಕ ಅಭಿಯಂತರ ಲಾರೇನ್ಸ್ ಮೊಬೈಲ್ ಸಂಖ್ಯೆ 9448872232 ಇವರನ್ನು ಸಂಪರ್ಕಿಸಬಹುದಾಗಿದೆ.

ಮೇಲುಕೋಟೆ, ನಾಗಮಂಗಲ, ಕೆ.ಆರ್.ಪೇಟೆ ಹಾಗೂ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವೆಚ್ಚ ವೀಕ್ಷಕರಾದ ಕುಮಾರ್ ಪ್ರಿಯತಮ್ ಅಶೋಕ್ ಮೊಬೈಲ್ ಸಂಖ್ಯೆ 9035056473 ಹಾಗೂ ಇವರ ಸಮನ್ವಯಾಧಿಕಾರಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಬಾಬಾಸಾಬ್ ಮೊಬೈಲ್ ಸಂಖ್ಯೆ 9448037547 ಇವರನ್ನು ಸಂಪರ್ಕಿಸಬಹುದಾಗಿದೆ.

ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಎಲ್ಲಾ ವಿಧಾನಸಭಾ ವಲಯಗಳಿಗೆ ಪೊಲೀಸ್ ವೀಕ್ಷಕರಾದ ದೀಪ ಸತ್ಯನ್ ಮೊಬೈಲ್ ಸಂಖ್ಯೆ 9035056474 ಹಾಗೂ ಇವರ ಸಮನ್ವಯಾಧಿಕಾರಿ ಸಿ.ಇ.ಎನ್ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಮಂಜೇಗೌಡ ಹೆಚ್.ಜಿ 9480804878 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!