ಮಂಡ್ಯ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾಗಿ ವಕೀಲರಾದ ಎಸ್.ಬಿ. ಸುಮಿತ್ರ ತಿಮ್ಮೇಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಬಾಲ ನ್ಯಾಯ ಮಂಡಳಿ, ಮಕ್ಕಳ ಪಾಲನೆ ಮತ್ತು ರಕ್ಷಣೆ ಮಾದರಿ ನಿಯಮಗಳು 2022 ರ ಅನ್ವಯ ವಿವಿಧ ಜಿಲ್ಲೆಗಳ ಮಕ್ಕಳ ಕಲ್ಯಾಣ ಸಮಿತಿಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರುಗಳನ್ನು ಮುಂದಿನ ಮೂರು ವರ್ಷಗಳ ಅವಧಿಗೆ ಕರ್ನಾಟಕ ಸರ್ಕಾರ ನೇಮಕಾತಿ ಮಾಡಿದ್ದು, ಮಂಡ್ಯ ಜಿಲ್ಲಾಧ್ಯಕ್ಷರಾಗಿ ಎಸ್.ಬಿ. ಸುಮಿತ್ರ ತಿಮ್ಮೇಶ್ ನೇಮಕವಾಗಿದ್ದಾರೆ.
ಸುಮಿತ್ರ ತಿಮ್ಮೇಶ್ ಅವರನ್ನು ಮಂಡ್ಯ ತಾಲ್ಲೂಕು ದಕ್ಷಿಣ ವಲಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಿವಣ್ಣಮಂಗಲ, ಕಾರ್ಯದರ್ಶಿ ಶಿವಕುಮಾರ್, ನಿರ್ದೇಶಕ ಜಿ.ಎಸ್.ಸಿದ್ದರಾಜು, ಸರ್ಕಾರಿ ನೌಕರರ ಸಂಘದ ನಿರ್ದೇಶಕ ಎಂ.ಎಂ.ರಾಘವೇಂದ್ರ ಅವರು ಅಭಿನಂದಿಸಿದರು.