ಅರಗ ಜ್ಞಾನೇಂದ್ರ ಅವರೇ, ನಿಮ್ಮ ಬ್ರಾಂಡ್ ಯಾವುದು? ಚೆನ್ನಾಗಿಯೇ ಕಿಕ್ ಹೊಡೆದಂತಿದೆ?! ಕಾಯ್ದೆ ಕಾನೂನುಗಳ ಕನಿಷ್ಠ ಜ್ಞಾನ ಇಲ್ಲದೆ ತೀರ ಬಾಲಿಶವಾಗಿ ಮಾತನಾಡುತ್ತಿರುವ ತಾವು 4 ವರ್ಷ ರಾಜ್ಯದ ಗೃಹಸಚಿವರಾಗಿದ್ದು ಘೋರ ದುರಂತ! ಎಂದು ಕಾಂಗ್ರೆಸ್ ಪಕ್ಷವು ಕಾಲೆಳೆದಿದೆ.
‘@JnanendraAraga ಅವರೇ, ನಿಮ್ಮ ಬ್ರಾಂಡ್ ಯಾವುದು? ಚೆನ್ನಾಗಿಯೇ ಕಿಕ್ ಹೊಡೆದಂತಿದೆ?!
ಕಾಯ್ದೆ ಕಾನೂನುಗಳ ಕನಿಷ್ಠ ಜ್ಞಾನ ಇಲ್ಲದೆ ತೀರ ಬಾಲಿಶವಾಗಿ ಮಾತನಾಡುತ್ತಿರುವ ತಾವು 4 ವರ್ಷ ರಾಜ್ಯದ ಗೃಹಸಚಿವರಾಗಿದ್ದು ಘೋರ ದುರಂತ!
ವನ್ಯಜೀವಿಗಳ ಉತ್ಪನ್ನಗಳ ಬಳಕೆ ಹಾಗೂ ಸಂಗ್ರಹ ವನ್ಯಜೀವಿಗಳ ಹತ್ಯೆಗೆ ಪ್ರೋತ್ಸಾಹಿಸುವ ಸಾಧ್ಯತೆ ಇರುವುದರಿಂದ… pic.twitter.com/51xgNkGFV4
— Karnataka Congress (@INCKarnataka) October 27, 2023
“>
ಇತ್ತೀಚೆಗೆ ಮಾಧ್ಯಮಗಳಲ್ಲಿ ಮಾತನಾಡಿದ ಅರಗ ಜ್ಞಾನೇಂದ್ರ, ಟಿಪ್ಪು ಹುಲಿ ಕೊಲ್ಲುತ್ತಿರುವ ಪೋಟೋ ಇಟ್ಟುಕೊಂಡಿರುವವರನ್ನು ಆರೆಸ್ಟ್ ಮಾಡಬೇಕು, ಪಾರಂಪರಾಗತವಾಗಿ ನಡೆದು ಬಂದ ಹುಲಿ ಉಗುರು ಇಟ್ಟುಕೊಂಡವರನ್ನು ಬಂಧಿಸಿಸುತ್ತಾ ಹೋದರೆ ನಮ್ಮ ಜೈಲುಗಳ ಸಾಕಾಗುವುದಿಲ್ಲ ಎಂದು ಹೇಳಿಕೆ ನೀಡಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದೆ.
ವನ್ಯಜೀವಿಗಳ ಉತ್ಪನ್ನಗಳ ಬಳಕೆ ಹಾಗೂ ಸಂಗ್ರಹ ವನ್ಯಜೀವಿಗಳ ಹತ್ಯೆಗೆ ಪ್ರೋತ್ಸಾಹಿಸುವ ಸಾಧ್ಯತೆ ಇರುವುದರಿಂದ ಜಾಗೃತಿ ಮೂಡಿಸುವ ಹಾಗೂ ಕಾನೂನು ಪಾಲಿಸುವ ಸಲುವಾಗಿ ಪ್ರಕರಣ ದಾಖಲಿಸಲಾಗುತ್ತಿದೆ. ಸರ್ಕಾರದ ಕಾನೂನು ಪಾಲನೆಯನ್ನು ಪ್ರೋತ್ಸಾಹಿಸಬೇಕೆ ಹೊರತು ಕೊಂಕು ತೆಗೆಯುವುದಲ್ಲ, ಹುಲಿ ಕೊಲ್ಲುವ ಟಿಪ್ಪು ಫೋಟೋ ನೋಡಿ ಜನರೂ ಹುಲಿ ಕೊಲ್ಲಲು ಹೋಗುತ್ತಾರೆ ಎನ್ನುವುದು ಮೂರ್ಖತನದ ಪರಮಾವಧಿ, ಜ್ಞಾನೇಂದ್ರರವರೇ, ಹೊಯ್ಸಳರ ಲಾಂಛನವೂ ಹುಲಿ ಕೊಲ್ಲುವುದೇ ಆಗಿದೆ.. ಅದನ್ನೂ ತೆಗೆಯಬೇಕು ಎನ್ನುತ್ತೀರಾ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.