ದೇಶಾದ್ಯಂತ ದೇಶದ ಪ್ರಥಮ ಪ್ರಜೆ ಹಾಗೂ 15 ನೇ ರಾಷ್ಟ್ರಪತಿ ಆಯ್ಕೆ ಚುನಾವಣೆಯಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಇಂದು ತಮ್ಮ ಮತ ಚಲಾಯಿಸಿದರು.
ಇಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ನಡೆದ ರಾಷ್ಟ್ರಪತಿ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸೌಧದ ಮೊದಲನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 106 ರಲ್ಲಿ ಸ್ಥಾಪಿಸಲಾಗಿದ್ದ ಮತಗಟ್ಟೆಗೆ ಶಾಸಕ ರವೀಂದ್ರ ಶ್ರೀಕಂಠಯ್ಯ ತೆರಳಿ,ಮತ ಚಲಾಯಿಸಿದರು.
ಜೆಡಿಎಸ್ ಪಕ್ಷದ ಆದೇಶದಂತೆ ದ್ರೌಪದಿ ಮುರ್ಮು ಅವರಿಗೆ ಮತ ಚಲಾಯಿಸಿರುವುದಾಗಿ ರವೀಂದ್ರ ತಿಳಿಸಿದರು.