Saturday, May 18, 2024

ಪ್ರಾಯೋಗಿಕ ಆವೃತ್ತಿ

ಕೆ.ಆರ್.ಪೇಟೆ | ಸಿಂದಘಟ್ಟ ಗ್ರಾ.ಪಂ. ಅಧ್ಯಕ್ಷರಾಗಿ ಆಶಾ ಸೋಮಶೇಖರ್ ಆಯ್ಕೆ

ಕೆ.ಆರ್.ಪೇಟೆ ತಾಲೂಕಿನ ಶೀಳನೆರೆ ಹೋಬಳಿಯ ಸಿಂದಘಟ್ಟ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಆಶಾ ಸೋಮಶೇಖರ್ ಅವಿರೋಧವಾಗಿ ಆಯ್ಕೆಯಾದರು.
ಈ ಹಿಂದಿನ ಅಧ್ಯಕ್ಷ ನವೀನ್ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಚುನಾವಣೆಗೆ ಆಶಾ ಸೋಮಶೇಖರ್ ಹೊರತುಪಡಿಸಿ ಬೇರೆ ಯಾರೂ ಸಹ ನಾಮಪತ್ರ ಸಲ್ಲಿಸದೇ ಇರುವ ಕಾರಣ ಆಶಾ ಸೋಮಶೇಖರ್ ಅವರು ಅವಿರೋಧ ಆಯ್ಕೆಯಾದ್ದರೆಂದು  ಚುನಾವಣಾಧಿಕಾರಿಯಾಗಿ ಇಓ ಸತೀಶ್ ಘೋಷಿಸಿದರು. ಸಹ ಚುನಾವಣಾಧಿಕಾರಿಯಾಗಿ ತಾ.ಪಂ.ಮ್ಯಾನೇಜರ್  ನಿಲ್ ಬಾಬು,  ಪಿಡಿಓ ಯಶಸ್ವಿನಿ ಕಾರ್ಯನಿರ್ವಹಿಸಿದರು.
ನೂತನ ಅಧ್ಯಕ್ಷೆ ಆಶಾ ಸೋಮಶೇಖರ್ ಮಾತನಾಡಿ, ನನಗೆ ಸಿಕ್ಕಿರುವ ಅಧಿಕಾರದ  ಅವಧಿಯಲ್ಲಿ ‌ನಮ್ಮ ಗ್ರಾ.ಪಂ. ವ್ಯಾಪ್ತಿಗೆ ಬರುವ ಪ್ರತಿ ಹಳ್ಳಿಗಳ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ, ನನ್ನ ಅವಿರೋಧ ಆಯ್ಕೆಗೆ ಸಹಕರಿಸಿದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸುತ್ತೇನೆಂದರು.
ನನಗೆ ಸಿಕ್ಕಿರುವ ಕಡಿಮೆ ಸಮಯದ ಅವಧಿಯಲ್ಲಿ ‌ಸಾರ್ವಜನಿಕರಿಗೆ ಸರ್ಕಾರದಿಂದ ಸಿಗಬಹುದಾದ. ನರೇಗಾ, ಆಶ್ರಯ ಮನೆ, ಕುಡಿಯುವ ನೀರು ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದಾಗಿ ಸಮಸ್ಯೆಗಳ ಪರಿಹಾರಕ್ಕಾಗಿ ಶ್ರಮಿಸಿ, ಪಕ್ಷಾತೀತ ನೆಲೆಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.
ನೂತನ ಅಧ್ಯಕ್ಷರನ್ನು ಶಾಸಕ ಹೆಚ್.ಟಿ.ಮಂಜು, ತಾಲ್ಲೂಕು ಜೆಡಿಎಸ್ ಅಧ್ಯಕ್ಷ  ಜಾನಕೀರಾಂ,  ಪಿಡಿಓ ಕೆ ಯಶಸ್ವಿನಿ, ನಿರ್ಗಮಿತ ಅಧ್ಯಕ್ಷ ನವೀನ್, ಸದಸ್ಯರಾದ ಕ್ಯಾತನಹಳ್ಳಿ ಸೋಮಶೇಖರ್, ಲಾವಣ್ಯ ಕುಮಾರ್, ರೂಪ ಮಹದೇವ್, ಸುಮ ಚಲುವರಾಜ್ ಇತರರು ಅಭಿನಂದಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!