Monday, May 20, 2024

ಪ್ರಾಯೋಗಿಕ ಆವೃತ್ತಿ

ಸಾವಿನ ಕೂಪವಾದ ಬೆಂಗಳೂರು – ಮೈಸೂರು ಹೆದ್ದಾರಿ ; ವಿಧಾನಸೌಧದಲ್ಲಿ ಮಂಡ್ಯ ಜನಪ್ರತಿನಿಧಿಗಳ ಸಭೆ

ಶಕ್ತಿ ಕೇಂದ್ರ ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಪ್ರತಿನಿತ್ಯ ಆಗುತ್ತಿರುವ ಅಪಘಾತಗಳನ್ನು ತಡೆಗಟ್ಟುವ ಕುರಿತು ಸೋಮವಾರ ಸಭೆ ನಡೆಯಿತು.

ಜಾಹೀರಾತು

ಬೆಂಗಳೂರು ಮೈಸೂರು ರಸ್ತೆಯಲ್ಲಿ ಅಪಘಾತಗಳು ಪ್ರತಿದಿನ ವರದಿಯಾಗುತ್ತಿರುವ ಬಗ್ಗೆ ಸಚಿವರು ಆತಂಕ ವ್ಯಕ್ತಪಡಿಸಿದ್ದು ಅವೈಜ್ಞಾನಿಕ ವಾಗಿ ರಸ್ತೆ ನಿರ್ಮಿಸಿರುವುದಕ್ಕೆ ಸಚಿವರು,ಸಂಸದರು, ಶಾಸಕರಿಂದ ಅಸಮಾಧಾನ ವ್ಯಕ್ತವಾಯಿತು.

ಅವೈಜ್ಞಾನಿಕ ಬೈಪಾಸ್ ರಸ್ತೆ ನಿರ್ಮಿಸಿರುವುದು,ಲೈಟ್ ವ್ಯವಸ್ಥೆ ಇರುವುದಿಲ್ಲ, ಸಂಪರ್ಕ ರಸ್ತೆ ಅಭಿವೃದ್ಧಿ ಸಮರ್ಪಕವಾಗಿರದಿರುವುದು, ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ದೀಪಗಳ ಸೌಲಭ್ಯ ವಿಲ್ಲ.
ದರೋಡೆ ಪ್ರಕರಣಗಳು ವರದಿಯಾಗುತ್ತಿವೆ. ರಸ್ತೆಯಲ್ಲಿ ಜನರು ಓಡಾಡಲು ಭಯಪಡುವಂತ ಸ್ಥಿತಿ ನಿರ್ಮಾಣವಾಗಿದೆ. ರಸ್ತೆ ಮಧ್ಯೆ ನಿರ್ಮಿಸಿರುವ ಡಿವೈಡರ್ ಕೇವಲ 225.ಸೆ.ಮಿ ಇದೆ ಇದನ್ನು ಕನಿಷ್ಟ 4 ಅಡಿ ಇದಿದ್ದರೆ ಎಷ್ಟೊ ಅಪಘಾತಗಳು ತಪ್ಪುತಿತ್ತು. ಮಳೆ ನೀರು ನಿಲ್ಲದಂತೆ ಕ್ರಮ ಕೈಗೊಂಡಿಲ್ಲ ಮತ್ತು ರಸ್ತೆಯಲ್ಲಿ ಮರಳು ಸಂಗ್ರಹವಾಗುವುದು ತಕ್ಷಣ ಸರಿಪಡಿಸಲು ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ರಸ್ತೆ ಪಕ್ಕದಲ್ಲಿರುವ ವಿದ್ಯುತ್ ಪರಿವರ್ತಕಗಳ ಸ್ಥಳಾಂತರ, ಆಗಮನ, ನಿರ್ಗಮನ ಮಾರ್ಗಗಳು ಅವೈಜ್ಞಾನಿಕ ವಾಗಿರುವುದು. ಟೋಲ್‌ ನಲ್ಲಿ ಗಣ್ಯರಿಗೆ‌, ಅಂಬ್ಯೂಲೆಸ್ಸ್ ತುರ್ತು ಸಂಚಾರಕ್ಕೆ ಪ್ರತ್ಯಕ ಮಾರ್ಗ ನಿರ್ಮಿಸಬೇಕೆಂದರು. ಸಾರ್ವಜನಿಕ‌ ಹಿತದೃಷ್ಟಿಯಿಂದ ಎಲ್ಲಾ ಲೋಪಗಳನ್ನು ಕಾಲಮಿತಿಯೊಳಗೆ ಸರಿಪಡಿಸಬೇಕೆಂದು ಅಧಿಕಾರಿಗಳಿಗೆ ಸಚಿವರಾದ ಚೆಲುವರಾಯಸ್ವಾಮಿ ಅವರು ತಾಕೀತು ಮಾಡಿದರು.

ಸಂಸದರು,ಶಾಸಕರ ಮತ್ತು NHI ಸಂಸ್ಥೆಯ ಉನ್ನತ ಅಧಿಕಾರಿಗಳು, PWD ಕಾರ್ಯದರ್ಶಿಗಳನ್ನೊಳಗೊಂಡ ತಜ್ಞರ ಸಮಿತಿ ರಚಿಸಲು ಮುಖ್ಯಮಂತ್ರಿ ಗಳನ್ನು ಒತ್ತಾಯಿಸಲು ಸಭೆಯಲ್ಲಿ ನಿರ್ಧರಿಸಲಾಗಿದ್ದು, ಸಮಿತಿಯು ಶೀಘ್ರದಲ್ಲಿ ಅಪಘಾತ ನಡೆಯುವ ಸ್ಥಳಗಳು ಮತ್ತು ಎಂಟ್ರಿ ಮತ್ತು ಎಕ್ಸಿಟ್ ಸ್ಥಳಗಳನ್ನು ನಿರ್ಮಾಣ ಸಮಸ್ಯೆಗಳನ್ನು ಪರಿಶೀಲಿಸಿ ಕಾಲಮಿತಿಯಲ್ಲಿ ವರದಿ ನೀಡಲು ತೀರ್ಮಾನಿಸಲಾಯಿತು.

ಈ ವರದಿಯನ್ನು ಮಾನ್ಯ ಮುಖ್ಯಮಂತ್ರಿಗಳಿಗೆ ಮತ್ತು ಲೋಕೋಪಯೋಗಿ ಸಚಿವರಿಗೆ ಮನವಿ ಸಲ್ಲಿಸಲಾಗುವುದು.ಮತ್ತು ಭಾರತೀಯ ಹೆದ್ದಾರಿ ಪ್ರಾಧಿಕಾರದ ಮಂತ್ರಿಗಳ ಜೊತೆ ಮಾತನಾಡಿ ಸರಿಪಡಿಸುವಂತೆ ಮನವಿ ಮಾಡಲಾಗುವುದು.

ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇನ್ನೂ ಬಾಕಿ ಉಳಿದಿರುವ ಹನಕೆರೆ ಅಂಡರ್ ಪಾಸ್ ಹಾಗೂ ಚಿಕ್ಕಮಂಡ್ಯ ಕಾಲುವೆ ಕಾಮಗಾರಿಗಳನ್ನು ಈವರೆಗೂ ಪ್ರಾರಂಭ ಮಾಡದೆ ಇದ್ದು ಕೂಡಲೇ ಕಾಮಗಾರಿ ಪ್ರಾರಂಭಿಸುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ಸಂಸದರಾದ ಸುಮಲತಾ ಅಂಬರೀಶ್, ಜಿಲ್ಲೆಯ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ರಮೇಶ್ ಬಾಬು ಬಂಡಿಸಿದ್ದೇಗೌಡ, ಉದಯ್ ಕದಲೂರು, ರವಿಕುಮಾರ್ ಗಣಿಗ, ವಿಧಾನ ಪರಿಷತ್ ಸದಸ್ಯರಾದ ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್, ಜಿಲ್ಲಾ ಪೋಲಿಸ್ ವರಿಷ್ಠಧಿಕಾರಿ ಎನ್.ಯತೀಶ್ ಸೇರಿದಂತೆ ಉನ್ನತ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!