Sunday, May 19, 2024

ಪ್ರಾಯೋಗಿಕ ಆವೃತ್ತಿ

ತುಮಕೂರು| ಮುತ್ತಿಗೆ ವೇಳೆ ಬಿಜೆಪಿ ಕಾರ್ಯಕರ್ತರಿಂದ ಡಿವೈಎಸ್ಪಿ ಮೇಲೆ ಹಲ್ಲೆ

ರಾಜ್ಯಸಭಾ ಚುನಾವಣೆಯ ವಿಜಯೋತ್ಸವದ ವೇಳೆ ಪಾಕಿಸ್ತಾನ ಪರ ಘೋಷಣೆ ಮಾಡಿದ್ದಾರೆ ಎಂಬ ಪ್ರಕರಣವನ್ನು ವಿವಾದವನ್ನಾಗಿಸಿರುವ ಬಿಜೆಪಿ, ಎಲ್ಲ ಜಿಲ್ಲೆಗಳಲ್ಲಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆ ನೀಡಿತ್ತಲ್ಲದೇ, ಕಾಂಗ್ರೆಸ್‌ ಕಚೇರಿಗೂ ಮುತ್ತಿಗೆ ಹಾಕುವಂತೆ ತಿಳಿಸಿತ್ತು.

ಈ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಮುಂದಾದ ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆಯುವ ವೇಳೆ ಪೊಲೀಸರ ಮೇಲೆಯೇ ಮುಗಿಬಿದ್ದಿದ್ದಾರೆ. ಈ ವೇಳೆ ಡಿವೈಎಸ್‌ಪಿ ಚಂದ್ರಶೇಖರ್ ಮೂಗಿಗೆ ಗಾಯವಾಗಿದೆ. ತುಮಕೂರಿನ ಭದ್ರಮ್ಮ ವೃತ್ತದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ನುಗ್ಗಲು ಯತ್ನಿಸಿದಾಗ ಈ ಘಟನೆ ನಡೆದಿದೆ.

“>

 

“ಮೂಗಿನ ಮೇಲೆ ರಕ್ತ ಸೋರುವ ಹಾಗೆ ಹಲ್ಲೆ ಮಾಡಿದ್ದಾರೆ. ಮ್ಯಾನ್ ಹ್ಯಾಂಡಲಿಂಗ್ ಮಾಡಿದ್ದಾರೆ” ಎಂದು ಡಿವೈಎಸ್‌ಪಿ ಚಂದ್ರಶೇಖರ್ ಅವರು ಸ್ಥಳದಲ್ಲೇ ಬಿಜೆಪಿ ಕಾರ್ಯಕರ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯ ವೇಳೆ ತುಮಕೂರು ಸಂಸದ ಜಿಎಸ್ ಬಸವರಾಜು ಕೂಡ ಸ್ಥಳದಲ್ಲಿದ್ದರು. ಕೂಡಲೇ ಅವರ ಗಮನಕ್ಕೆ ತಂದ ಡಿವೈಎಸ್‌ಪಿ, ಕರ್ತವ್ಯ ನಿರತನಾಗಿದ್ದ ನನ್ನ ಹಲ್ಲೆ ಮಾಡಿದ್ದಾರೆ. ಆದ್ದರಿಂದ ಯಾವುದೇ ಮುಲಾಜಿಲ್ಲದೇ ಎಫ್ಐಆರ್ ಮಾಡಿ ಅರೆಸ್ಟ್ ಮಾಡುತ್ತೇನೆ” ಎಂದು ತಿಳಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!