Saturday, September 21, 2024

ಪ್ರಾಯೋಗಿಕ ಆವೃತ್ತಿ

ಎಸ್ ಆರ್‌ ಪಾಟೀಲ್, ಕೆ.ಟಿ.ಶ್ರೀಕಂಠೇಗೌಡರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ವಿಧಾನ ಪರಿಷತ್ತಿನ 2021 ಮತ್ತು 22 ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ವಿರೋಧ ಪಕ್ಷದ ಮಾಜಿ ನಾಯಕ ಎಸ್.ಆರ್.ಪಾಟೀಲ್ ಹಾಗೂ ವಿಧಾನ ಪರಿಷತ್ ಸದಸ್ಯ ಮಾಜಿ ಕೆ.ಟಿ. ಶ್ರೀಕಂಠೇಗೌಡರಿಗೆ ಪ್ರದಾನ ಮಾಡಿದರು.

ಎಸ್‌ ಆರ್‌ ಪಾಟೀಲ್‌ ಅವರಿಗೆ 2021ನೇ ಸಾಲಿನ ಮತ್ತು ಕೆ ಟಿ ಶ್ರೀಕಂಠೇಗೌಡ ಅವರಿಗೆ 2022ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ಎಂ.ಕೆ.ಪ್ರಾಣೇಶ್, ಸಚಿವರಾದ ಎಚ್.ಕೆ ಪಾಟೀಲ್ ಹಾಗೂ ಎನ್.ಎಸ್. ಬೋಸರಾಜು, ಪರಿಷತ್ ಸದಸ್ಯರಾದ ಭೋಜೇಗೌಡ, ಟಿ. ಎ. ಶರವಣ, ಮುಖ್ಯ ಸಚೇತಕ ಸಲೀಂ ಅಹ್ಮದ್, ವೈ.ಎ. ನಾರಾಯಣಸ್ವಾಮಿ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!