Friday, September 20, 2024

ಪ್ರಾಯೋಗಿಕ ಆವೃತ್ತಿ

ಗಾಂಧಿ ಕುರಿತ ಪ್ರಬಂಧ ಸ್ಪರ್ಧೆ: ಮಂಡ್ಯದ ಉದಯ್ ಕುಮಾರ್ ಗೆ ಬಹುಮಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಾತ್ಮ ಗಾಂಧಿ ಅವರ 154 ನೇ ಜಯಂತಿಯ ಅಂಗವಾಗಿ ಆಯೋಜಿಸಲಾಗಿದ್ದ ಮಹಾತ್ಮ ಗಾಂಧೀಜಿ ಕುರಿತು ಪ್ರಬಂಧ ಸ್ಪರ್ಧೆಯಲ್ಲಿ ಪದವಿ ಪೂರ್ವ ವಿಭಾಗದಲ್ಲಿ ಮಂಡ್ಯ ಜಿಲ್ಲೆಯ ಸರ್ಕಾರಿ ಪದವಿ ಪೂರ್ವ (ಮಾಜಿ ಪುರಸಭೆ) ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಉದಯ್ ಕುಮಾರ್ ಎಂ.ಎಸ್ ರಾಜ್ಯಮಟ್ಟದಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ.

ಇಂದು ಬೆಂಗಳೂರಿನ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣದಲ್ಲಿ ಆಯೋಜಿಸಲಾಗಿದ್ದ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಹುಮಾನ ವಿಜೇತ ವಿದ್ಯಾರ್ಥಿ ಉದಯ್ ಕುಮಾರ್ ಎಂ‌ ಎಸ್ ಅವರಿಗೆ 21,000 ರೂ ನಗದು ಬಹುಮಾನ ಹಾಗೂ ಪಾರಿತೋಷಕ ನೀಡಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ್ ಡೊಳ್ಳಿನ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!