Thursday, September 19, 2024

ಪ್ರಾಯೋಗಿಕ ಆವೃತ್ತಿ

ಔಷಧ ವ್ಯಾಪಾರಿಗಳು- ವಿತರಕರ ಏಳಿಗೆಯೇ ನನ್ನ ಆದ್ಯ ಕರ್ತವ್ಯ – ಬಿ.ಲೋಕೇಶ್

ಜಿಲ್ಲೆಯ ಔಷಧ ವ್ಯಾಪಾರಿಗಳ ಹಾಗೂ ವಿತರಕರ ಏಳಿಗೆಯೇ ನನ್ನ ಆದ್ಯ ಕರ್ತವ್ಯ. ಎಲ್ಲ ಸದಸ್ಯರನ್ನು ಒಂದೇ ರೀತಿ ಎಂದು ಭಾವಿಸಿ ಅವರಲ್ಲಿ ಒಬ್ಬರಿಗೂ ತೊಂದರೆ ಆಗದಂತೆ ಹಾಗೂ ಸಮಸ್ಯೆ ಬಾರದಂತೆ ನೋಡಿಕೊಳ್ಳಲಾಗುವುದು ಎಂದು ಮಂಡ್ಯ ಜಿಲ್ಲಾ ಔಷಧ ವ್ಯಾಪಾರಿಗಳ ಹಾಗೂ ವಿತರಕರ ಸಂಸ್ಥೆಯ ಅಧ್ಯಕ್ಷ ಬಿ.ಲೋಕೇಶ್ ಹೇಳಿದರು.

ಮಂಡ್ಯ ತಾಲೂಕಿನ ಹೊಸ ಬೂದನೂರಿನ ಹೋಟೆಲ್ ಲೆಮನ್ ಗ್ರಾಸ್‌ನಲ್ಲಿ ನಡೆದ ವಾರ್ಷಿಕ ಸಭೆ, ವೆಬ್‌ಸೈಟ್ ಹಾಗೂ ಸ್ಮರಣ ಸಂಚಿಕೆ ಬಿಡುಗಡೆ ಮತ್ತು ಸನ್ಮಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,  ರಾಜ್ಯ ಹಾಗೂ ರಾಷ್ಟ್ರೀಯ ಸಂಸ್ಥೆಯ ಬೆಂಬಲದೊಂದಿಗೆ ನಮ್ಮ ಸಂಸ್ಥೆಯನ್ನು ಮತ್ತಷ್ಟು ಬಲಗೊಳಿಸುತ್ತೇನೆ ಎಂದು ತಿಳಿಸಿದರು.

ಜಾಹೀರಾತು

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ರಾಜ್ಯಾಧ್ಯಕ್ಷ ಆರ್.ರಘುರೆಡ್ಡಿ, ಜಿಲ್ಲಾ ಮಟ್ಟದಲ್ಲಿ ಯಾವುದೇ ಸಮಸ್ಯೆಗಳಿದ್ದರೂ ಸಂಸ್ಥೆಯ ಮೂಲಕ ನಮ್ಮ ಗಮನಕ್ಕೆ ತಂದರೆ ಬಗೆಹರಿಸಲಾಗುವುದು ಎಂದರು. ವೆಬ್‌ಸೈಟ್ ಹಾಗೂ ಸ್ಮರಣ ಸಂಚಿಕೆಯನ್ನು ಸಂಸ್ಥೆಯ ರಾಜ್ಯ ಕಾರ್ಯದರ್ಶಿ ಕೆ.ಜೀವನ್ ಬಿಡುಗಡೆ ಮಾಡಿದರು. ಕಾರ್ಯದರ್ಶಿ ಕೆ.ಎಲ್.ರಾಜಶೇಖರ್ ವಾರ್ಷಿಕ ವರದಿ ಮಂಡಿಸಿದರು.

ರಾಜ್ಯ ಉಪಾಧ್ಯಕ್ಷರಾದ ಬಿ.ಕೆ.ಪ್ರಸನ್ನಕುಮಾರ್, ಶಿವರಾಜ್‌ಪಾಟೀಲ್, ಜಂಟಿ ಕಾರ್ಯದರ್ಶಿ ಜಿ.ಎನ್.ಭಾನುಪ್ರಕಾಶ್, ಸಂಘಟನಾ ಕಾರ್ಯದರ್ಶಿ ಬಂಡು ಆರ್.ಕತ್ತಿಸ, ಖಜಾಂಚಿ ಬಿ.ಉಮೇಶ್, ಪೋಪಾಟ್‌ಲಾಲ್, ಎಂ.ನಂದೀಶ್, ಕೆ.ಪ್ರಭಾಕರನ್, ಧನ್ವಂತರಿ ಕೃಷ್ಣಪ್ಪ, ವೈಷ್ಣವಿ ಮಂಜುನಾಥ್, ಮಹೇಶ, ಸುರೇಶ್, ನಂಜೇಗೌಡ, ಭೀಮಣ್ಣ, ಗಿರೀಶ್, ಸತೀಶ್, ಶಾಂತಿಬಾಬು ಇತರರಿದ್ದರು.

ಇದೇ ವೇಳೆ 25 ವರ್ಷ ನಿರಂತರ ಸೇವೆ ಸಲ್ಲಿಸಿದ ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು. ಇತ್ತೀಚೆಗೆ ಅಕಾಲಿಕ ಮರಣಕ್ಕೆ ತುತ್ತಾದ ಸಂಸ್ಥೆಯ ಸದಸ್ಯರೂ ಆದ ಮಳವಳ್ಳಿಯ ಖ್ಯಾತ ವೈದ್ಯ ಡಾ.ಶ್ರೀಧರ್ ಅವರ ಆತ್ಮಕ್ಕೆ ಶಾಂತಿ ಕೋರುವುದರ ಜತೆಗೆ ಅವರ ಕುಟುಂಬಕ್ಕೆ 25 ಸಾವಿರ ರೂ ಚೆಕ್ ನೀಡಲಾಯಿತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!