ಶ್ರೀರಂಗಪಟ್ಟಣ ತಾಲ್ಲೂಕಿನ ಬೆಳಗೊಳ ಗ್ರಾಮ ಪಂಚಾಯಿತಿಯ ನೂತನ ಉಪಾಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಬಿ.ರವಿಕುಮಾರ್ ಅವಿರೋಧ ಆಯ್ಕೆಯಾದರು.
ಜೆಡಿಎಸ್,ಕಾಂಗ್ರೆಸ್ ಬೆಂಬಲಿತ ಸದಸ್ಯರ ಒಡಂಬಡಿಕೆಯಂತೆ ನಿಕಟಪೂರ್ವ ಉಪಾಧ್ಯಕ್ಷ ಪುಟ್ಟರಾಜು ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಿಗದಿಯಾಗಿತ್ತು.
ಪಂಚಾಯಿತಿಯಲ್ಲಿ ಒಟ್ಟು 26 ಸದಸ್ಯರಿದ್ದು, ಬಿ.ರವಿಕುಮಾರ್ ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಪಶು ಇಲಾಖೆಯ ಸಹಾಯಕ ನಿರ್ದೇಶಕ ಡಾ.ಶಿವಲಿಂಗಯ್ಯ ಅವಿರೋಧ ಆಯ್ಕೆ ಎಂದು ಘೋಷಣೆ ಮಾಡಿದರು.
ಇದೇ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷೆ ಶಿವಮ್ಮ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನೂತನ ಉಪಾಧ್ಯಕ್ಷರಾಗಿರುವ ಬಿ.ರವಿಕುಮಾರ್ ಅವರನ್ನೇ ಸೆ. 5 ರವರೆಗೆ ಪ್ರಭಾರ ಅಧ್ಯಕ್ಷರನ್ನಾಗಿ ಚುನಾವಣಾಧಿಕಾರಿಗಳು ನೇಮಕ ಮಾಡಿದರು.
ಗ್ರಾ.ಪಂ. ಮಾಜಿ ಅಧ್ಯಕ್ಷ ಬಿ.ವಿ.ಸುರೇಶ್ ,ಮಂಜುಳಮ್ಮ, ಶಿವಮ್ಮ , ಯಜಮಾನ್ ಶ್ರೀನಿವಾಸೇಗೌಡ , ಸ್ವಾಮಿಗೌಡ,ತಾಪಂ ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಸದಸ್ಯರಾದ ಪ್ರಕಾಶ್, ಅಶ್ವಿನಿ, ಸುಧಾ, ಪುಟ್ಟರಾಜು, ಶಿವಕುಮಾರ್, ವೆಂಕಟಲಕ್ಷಮ್ಮ, ದಾಕ್ಷಾಯಿಣಿ, ಮಾಜಿ ಸದಸ್ಯ ರವಿಕುಮಾರ್, ಪಿಡಿಒ ತಿಲಕ್ ಸೇರಿದಂತೆ ಇತರ ಸದಸ್ಯರು ಹಾಗೂ ಗ್ರಾಮಸ್ಥರು, ನೂತನ ಪ್ರಭಾರ ಅಧ್ಯಕ್ಷ ರವಿಕುಮಾರ್ ಅವರನ್ನು ಅಭಿನಂಧಿಸಿದರು.