ಮಂಡ್ಯ ನಗರದ 35ನೇ ವಾರ್ಡ್ ನ ದೇವೇಗೌಡನದೊಡ್ಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಶುಗರ್ ಟೌನ್ ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಶ್ರೀ ಶಂಭು ಸೇವಾ ಟ್ರಸ್ಟ್ ವತಿಯಿಂದ ಶಾಲಾ ಬ್ಯಾಗ್ ವಿತರಣೆ ಮಾಡಲಾಯಿತು.
ಶ್ರೀ ಶಂಭು ಸೇವಾ ಟ್ರಸ್ಟ್ ಅಧ್ಯಕ್ಷ, ಮನ್ ಮುಲ್ ಮಾಜಿ ಅಧ್ಯಕ್ಷ ಬಿ.ಆರ್.ರಾಮಚಂದ್ರು ಅವರು ಶಾಲಾ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ ಮಾಡಿ ಮಾತನಾಡುತ್ತಾ, ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ನೆರವಾಗುವ ದೃಷ್ಟಿಯಿಂದ ಶಾಲಾ ಬ್ಯಾಗ್ ವಿತರಣೆ ಮಾಡಿದ್ದೇವೆ.ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮವಾಗಿ ವಿದ್ಯಾಭ್ಯಾಸ ಮಾಡಿ ಶಾಲೆಗೆ ಹಾಗೂ ಪೋಷಕರಿಗೆ ಕೀರ್ತಿ ತರ ಬೇಕೆಂದರು.
ಈ ಸಂದರ್ಭದಲ್ಲಿ ಶಂಭು ಸೇಬಾ ಟ್ರಸ್ಟ್ ನ ಕಾರ್ಯದರ್ಶಿ ಸುರೇಶ್, ಬೋರೇಗೌಡ, ಚಂದ್ರಶೇಖರ್,ರವಿ, ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.