ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಓಡಾಡಲು ದುಬಾರಿ ಟೋಲ್ ಸಂಗ್ರಹ ಮಾಡಲಾಗುತ್ತಿದೆ ಎಂಬುದು ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಗಮನಕ್ಕೂ ಬಂದಿದೆ.
ಮಂಗಳವಾರ ಬಿಡದಿಯಿಂದ ರಾಮನಗರಕ್ಕೆ ತೆರಳಿದ ಡಿ.ಕೆ.ಶಿವಕುಮಾರ್ ಕಾರಿಗೆ ಬರೋಬರಿ ₹135 ರೂ. ಟೋಲ್ ಹಾಕಿದ್ದಲ್ಲದೆ, ಟೋಲ್ ಸಿಬ್ಬಂದಿ ಪಾಸ್ಟ್ ಟ್ಯಾಕ್ ಸ್ಕ್ಯಾನರ್ ನೆಪ ಹೇಳಿ ₹270 ಕಿತ್ತಿದ್ದಾರೆಂದು ಡಿ.ಕೆ.ಶಿವಕುಮಾರ್ ಸ್ವತಃ ಟ್ವೀಟ್ ಮಾಡಿದ್ದಾರೆ.
ಬೆಂಗಳೂರು – ಮೈಸೂರು ಟೋಲ್ ಕೇಂದ್ರದ ಬಳಿ ಜನ ಆಕ್ರೋಶ ವ್ಯಕ್ತಪಡಿಸಿದ್ದನ್ನು ಬೆಳಗಿನಿಂದ ಟಿವಿ, ಪತ್ರಿಕೆಯಲ್ಲಿ ನೋಡಿದ್ದೆ. ಇಂದು ಬಿಡದಿಯಿಂದ ರಾಮನಗರಕ್ಕೆ ತೆರಳುವ ವೇಳೆ ನನಗೂ ಅನುಭವಕ್ಕೂ ಬಂತು. ಬಿಡದಿಯಿಂದ ರಾಮನಗರಕ್ಕೆ ತೆರಳಲು ₹135 ಟೋಲ್ ಕೊಡಬೇಕಂತೆ, ಫಾಸ್ಟ್ಟ್ಯಾಗ್ ಸ್ಕ್ಯಾನರ್ ತೊಂದರೆ ನೆಪ ಹೇಳಿ ₹270 ವಸೂಲಿ ಮಾಡಿದ್ದಾರೆ ಎಂದು ಸ್ವತಃ ಡಿ.ಕೆ.ಶಿವಕುಮಾರ್ ಹೇಳಿಕೊಂಡಿದ್ದಾರೆ.