ತುಮಕೂರು ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮತ್ತು ಅವಳಿ ಮಕ್ಕಳು ಮೃತಪಟ್ಟ ಪ್ರಕರಣದ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದು, ಆರೋಗ್ಯ ಸಚಿವ ಸುಧಾಕರ್ ಗೆ “ಸಾವುಗೇಡಿ ಸರ್ಕಾರದ ಆಡಳಿತದಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ಸಾವಿನ ಕೂಪಗಳನ್ನಾಗಿ ಪರಿವರ್ತನೆ ಮಾಡಿದ ಕೀರ್ತಿ ನಿಮ್ಮದು” ಎಂದು ಟ್ವೀಟ್ ಮಾಡಿದ್ದಾರೆ.
ಮಾನ್ಯ @mla_sudhakar ಅವರೇ; ಸಾವು, ಕ್ರೌರ್ಯವನ್ನೇ ಸಂಭ್ರಮಿಸುವ ʼಸಾವುಗೇಡಿ ಸರಕಾರʼದ ಆಡಳಿತದಲ್ಲಿ ಸರಕಾರಿ ಆಸ್ಪತ್ರೆಗಳನ್ನು ಸಾವಿನಕೂಪಗಳನ್ನಾಗಿ ಪರಿವರ್ತನೆ ಮಾಡಿದ ಕೀರ್ತಿ ನಿಮ್ಮದು. ತುಮಕೂರು ಆಸ್ಪತ್ರೆ ಮತ್ತು ವೈದ್ಯೆಯ ದರ್ಪದಿಂದ ಆದ 3 ಅಮಾನುಷ ಸಾವುಗಳ ಬಗ್ಗೆ ನಿಮಗೆ ಕೊನೆಪಕ್ಷ ಪಶ್ಚಾತ್ತಾಪ, ಪಾಪಪ್ರಜ್ಞೆ ಬೇಡವೇ? 1/10
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 5, 2022
“>
ಕುಮಾರಸ್ವಾಮಿ ಆರೋಪಗಳಿಗೆ ಸಮಜಾಯಿಷಿ ನೀಡುವ ಭರದಲ್ಲಿ ಸುಧಾಕರ್ ಅವರು, ಹೆಚ್ಡಿಕೆ ಮುಖ್ಯಮಂತ್ರಿಯಾಗಿದ್ದಾಗ ನಡೆದಿದ್ದ ಸುಳವಾಡಿ ದೇವಸ್ಥಾನ ಘಟನೆ ಬಗ್ಗೆ ಪ್ರಸ್ತಾಪಿಸಿದ್ದರು, ಇದಕ್ಕೆ ಖಾರವಾಗೇ ಪ್ರತಿಕ್ರಿಯಿಸಿರುವ ಹೆಚ್ಡಿಕೆ, “ಸುಧಾಕರ್ ಅವರೇ; ಸಾವು, ಕ್ರೌರ್ಯವನ್ನೇ ಸಂಭ್ರಮಿಸುವ ‘ಸಾವುಗೇಡಿ ಸರ್ಕಾರ’ದ ಆಡಳಿತದಲ್ಲಿ ಸರ್ಕಾರಿ ಆಸ್ಪತ್ರೆಗಳನ್ನು ಸಾವಿನ ಕೂಪಗಳನ್ನಾಗಿ ಪರಿವರ್ತನೆ ಮಾಡಿದ ಕೀರ್ತಿ ನಿಮ್ಮದು. ತುಮಕೂರು ಆಸ್ಪತ್ರೆ ಮತ್ತು ವೈದ್ಯೆಯ ದರ್ಪದಿಂದ ಆದ ಮೂರು ಅಮಾನುಷ ಸಾವುಗಳ ಬಗ್ಗೆ ನಿಮಗೆ ಕೊನೇಪಕ್ಷ ಪಶ್ಚಾತ್ತಾಪ, ಪಾಪಪ್ರಜ್ಞೆ ಬೇಡವೇ’ ಎಂದು ಪ್ರಶ್ನಿಸಿದ್ದಾರೆ.
“ಡಾ.ಸುಧಾಕರ್ ಅವರೇ; ನಾನು ಎತ್ತಿದ ಪ್ರಶ್ನೆ ಏನು? ನೀವು ಕೊಟ್ಟ ಉತ್ತರವೇನು? ಮನುಷ್ಯತ್ವ ಇದೆಯಾ ನಿಮಗೆ? ನಿಮ್ಮ ವೈಫಲ್ಯಗಳನ್ನು ಸಮರ್ಥಿಸಿಕೊಳ್ಳುತ್ತಿದ್ದೀರಿ ಎಂದರೆ; ಆ ಬಾಣಂತಿ, ಆಕೆಯ ಎರಡು ನವಜಾತ ಶಿಶುಗಳ ಸಾವನ್ನೂ ಸಂಭ್ರಮಿಸುತ್ತಿದ್ದೀರಿ ಎಂದೇ ಅರ್ಥ. ನಿಮ್ಮ ವಿಕೃತ ಮನಸ್ಥಿಗೆ ನನ್ನ ಧಿಕ್ಕಾರವಿದೆ ಎಂದು ತಮ್ಮ ಅಕ್ರೋಶ ವ್ಯಕ್ತಪಡಿಸಿದ್ದಾರೆ.